ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಧಾರವಾಡ, ಏಪ್ರಿಲ್​​ 10: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್​​ ಸಿಗ್ನಲ್​​ ನೀಡಿದೆ. ಏಪ್ರಿಲ್​​ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್​​ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾ.ಅಶೋಕ ಕಿನಗಿ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ನ್ಯಾಯಾಲಯದ ಷರತ್ತುಗಳೇನು?

  • ನೆಹರು ಮೈದಾನದಲ್ಲಿ 100 ಜನರಿಗೆ ನಾತ್ರ ಪ್ರತಿಭಟನೆಗೆ ಅವಕಾಶ
  • ಪ್ರತಿಭಟನೆ ಮಾಡುವವರ ಕುರಿತ ಮಾಹಿತಿಯನ್ನು ಇಲಾಖೆಗೆ ನೀಡಬೇಕು
  • ಪ್ರತಿಭಟನೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವಂತವರು ಇರಬಾರದು
  • ಯಾವುದೇ ಕಾರಣಕ್ಕೂ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಪ್ರತಿಭಟಿಸಬೇಕು
  • ಅರ್ಜಿಯೊಂದಿಗೆ ನೀಡಿದ ಪಟ್ಟಿಯಲ್ಲಿರುವವರು ಮಾತ್ರ ಭಾಗವಹಿಸಬೇಕು
  • ಲಿಸ್ಟ್​​ನಲ್ಲಿ ಇಲ್ಲದವರು ಪ್ರತಿಭಟನೆಯಲ್ಲಿ ಭಾಗವಹಿಸುವಂತಿಲ್ಲ

ಇದನ್ನೂ ಓದಿ: ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ

ಇನ್ನು ಕೋರ್ಟ್​​ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಈ ಹಿಂದೆ ಕೆಲ ಅಹಿತಕರ ಘಟನೆಗಳು ನಡೆದಿರುವ ಕಾರಣ ಪ್ರತಿಭಟನೆಗೆ ನಾವು ಅನುಮತಿ ನೀಡಿರಲಿಲ್ಲ. ಆದರೆ ಸಂಘಟನೆಯವರು ಕೋರ್ಟ್​​ ಮೊರೆ ಹೋಗಿದ್ದು, ಈ ಸಂಬಂಧ ನಮಗೆ ಉತ್ತರಿಸಲು ಹೈಕೋರ್ಟ್ ಎರಡು ದಿನಗಳ ಕಾಲಾವಕಾಶ ನೀಡಿತ್ತು. ಅದರಂತೆ ನಾವು ವಿವರವಾದ ಮಾಹಿತಿಯನ್ನು ನೀಡಿದ್ದೆವು. ಅದರಂತೆ ಕೆಲ ಷರತ್ತುಗಳ ಜೊತೆ ಸಂಘಟನೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶವನ್ನು ಕೋರ್ಟ್​​ ನೀಡಿದೆ ಹಿಂದಿನ 2 ಪ್ರತಿಭಟನೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದವು. ಕಳೆದ ಬಾರಿ ನಡೆದ ಪ್ರತಿಭಟನೆಯಲ್ಲಿ 17 ಸಿಬ್ಬಂದಿಗೆ ಪೆಟ್ಟುಗಳಾಗಿದ್ದು, ಆ ಕುರಿತು 6 ಪ್ರಕರಣಗಲು ದಾಖಲಾಗಿದ್ದವು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *