ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ತೀರ್ಪು ಪ್ರಕಟಗೊಂಡ ಬಳಿಕ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದ್ದು, ವಿನಯ್ ಕುಲಕರ್ಣಿ ನಿವಾಸದ ಬಳಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ರೌಂಡ್ಸ್ ಹಾಕುತ್ತಿದ್ದಾರೆ.

Source link

Leave a Reply

Your email address will not be published. Required fields are marked *