ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯಕ್ಕೆ ಧುಮುಕಿದ್ದು ಟಿವಿಕೆ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿ, ತಮಿಳುನಾಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಭರ್ಜರಿಯಾಗಿ ರಾಜ್ಯದಾದ್ಯಂತ ಪ್ರಚಾರ ಮಾಡುತ್ತಿರುವ ದಳಪತಿ ವಿಜಯ್ ಅವರು ಖುದ್ದಾಗಿ ಎರಡು ಕ್ಷೇತ್ರಗಳಿಂದ ಚುನಾವಣೆಗೂ ಸಹ ಸ್ಪರ್ಧೆ ಮಾಡಿದ್ದಾರೆ. ದಳಪತಿ ವಿಜಯ್ ಅವರಿಗೆ ಉತ್ತಮ ಬೆಂಬಲ ತಮಿಳುನಾಡಿನಲ್ಲಿ ವ್ಯಕ್ತವಾಗುತ್ತಿದೆ. ಇದೀಗ ಮೈಸೂರಿನಿಂದ ಅರುಳ್ ಸೆಲ್ವಂ ಹೆಸರಿನ ಯುವಕ ಸೈಕಲ್ ಯಾತ್ರೆ ಮಾಡಿಕೊಂಡು ತಮಿಳುನಾಡಿಗೆ ಹೋಗಿ ವಿಜಯ್ಗೆ ಬೆಂಬಲ ಸೂಚಿಸಲಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ