Headlines

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?: ಮರ್ಮಾಂಗದ ಭಾದೆ ತಾಳಲಾರದೆ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ – Kannada News | Victoria Hospital Negligence: Bengaluru Man Dies After Unstitched Wound, Family Alleges

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?Image Credit source: Tv9 Kannada

ಬೆಂಗಳೂರು, ಏಪ್ರಿಲ್​​ 22: ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಎಂತಹ ಸ್ಥಿತಿಯಲ್ಲೂ ರೋಗಿಯನ್ನು ಪ್ರಾಣಾಪಾಯದಿಂದ ಪಾರುಮಾಡುವ ಕಾರಣ ದೇವರಿಗೆ ಅವರನ್ನು ಹೋಲಿಸಲಾಗುತ್ತದೆ. ಆದರೆ ಕೆಲವೊಮ್ಮೆ ಇದೇ ವೈದ್ಯರು ರೋಗಿಗಳ ಪಾಲಿಗೆ ಯಮನಾದ ಉದಾಹರಣೆಗಳೂ ಇವೆ. ಇಂತಹುದ್ದೇ ಆರೋಪವೊಂದು ಈಗ ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ವಿರುದ್ಧ ಕೇಳಿಬಂದಿದೆ. ಡಾಕ್ಟರ್​​ ನಿರ್ಲಕ್ಷ್ಯಕ್ಕೆ ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿದ್ದಾನೆ ಎಂದು ದೂರಲಾಗಿದ್ದು, ಇದು ಇಡೀ ವೈದ್ಯ ಲೋಕವೇ ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಎಂಬ ಮಾತುಗಳು ಕೇಳಿಬಂದಿವೆ.

ಹೌದು, ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್ ಎಂಬ ವ್ಯಕ್ತಿ ಮರ್ಮಾಂಗದಲ್ಲಿ ಗಡ್ಡೆ ಬೆಳೆದ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದೂವರೆ ತಿಂಗಳ ಹಿಂದೆ ಆಸ್ಪತ್ರೆ ಎಮರ್ಜೆನ್ಸಿ ವಿಭಾಗಕ್ಕೆ ಅವರನ್ನು ಎಡ್ಮಿಟ್​​ ಮಾಡಿಕೊಳ್ಳಲಾಗಿತ್ತು. ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಹೇಳಿದ್ದು, ಬಳಿಕ ಚಿಕಿತ್ಸೆಗಾಗಿ ಆತನ ಮರ್ಮಾಂಗವನ್ನು ಆಸ್ಪತ್ರೆ ಸಿಬ್ಬಂದಿ ಕೊಯ್ದಿದ್ದರು. ಅದಾದ ಕೆಲ ದಿನಗಳ ಬಳಿಕ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ಹೋಗುವಂತೆ ತಿಳಿಸಿದ್ದರು. ಆದರೆ ಗಾಯ ಇನ್ನೂ ಆರಿಲ್ಲ ಎಂದು ಈ ವೇಳೆ ಸರ್ಜರಿ ವಿಭಾಗ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಆಪರೇಷನ್ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಸಿಬ್ಬಂದಿ ಸಮನ್ವಯತೆ ಕೊರತೆ ಕಾರಣ ರೋಗಿ ಗಂಭೀರ ಸ್ಥಿತಿಯಲ್ಲಿ ಇರುವಾಗಲೇ ಡಿಸ್ಚಾರ್ಜ್ ಆಗುವಂತೆ ಒತ್ತಡ ಹೇರಲಾಗಿದೆ. ಕೊನೆಗೆ ಕೊಯ್ದಿದ್ದ ಮರ್ಮಾಂಗಕ್ಕೆ ಹೊಲಿಗೆ ಕೂಡ ಮಾಡದೇ ಸಿಬ್ಬಂದಿ ಕಳುಹಿಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:  ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ?

ಪತಿ ಜೊತೆ ಫುಟ್​​ಪಾತ್​​ನಲ್ಲೇ 3 ದಿನ ಕಳೆದ ಪತ್ನಿ

ಎಷ್ಟೇ ಅಂಗಲಾಚಿದರೂ ಆಸ್ಪತ್ರೆ ಸಿಬ್ಬಂದಿ ಮತ್ತೆ ಅಡ್ಮಿಟ್ ಮಾಡಿಕೊಳ್ಳದ ಕಾರಣ ಕೊನೆಗೆ 3 ದಿನ ಫುಟ್​​ಪಾತ್​​ನಲ್ಲೇ ರೋಗಿ ಪತಿಯನ್ನು ಮಡದಿ ಇಟ್ಟುಕೊಂಡಿದ್ದರು. ಮರ್ಮಾಂಗದಿಂದ ರಕ್ತ ಸುರಿಯುತ್ತಲೇ ಇದ್ದರೂ ಹೊಲಿಗೆ ಕೂಡ ಮಾಡದೇ ನಿರ್ಲಕ್ಷ್ಯ ತೋರಿದ ಕಾರಣ ಕೊನೆಗೆ ಮರ್ಮಾಂಗದ ಭಾದೆ ತಾಳಲಾರದೆ ನವಾಜ್ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ. ನವಾಜ್​​ರನ್ನೇ ನಂಬಿಕೊಂಡಿದ್ದ ಹೆಂಡತಿ ಹಾಗೂ ನಾಲ್ಕು ಮಂದಿ ಮಕ್ಕಳು ಘಟನೆಯಿಂದ ಬೀದಿಗೆ ಬಿದ್ದಿದ್ದು, ಮನೆಗೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *