Headlines

ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು – Kannada News | Bengaluru Heatwave: Doctors Warn Against Excessive Ice Cream and Cold Drinks Consumption as Temperatures Rise

ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಮುರಳೀಧರ್ ಹಾಗೂ ಕೂಲ್ ಡ್ರಿಂಕ್ಸ್​ನ ಸಾಂದರ್ಭಿಕ ಚಿತ್ರImage Credit source: tv9

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ (Bengaluru) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮನೆಯಿಂದ ಹೊರಬಂದರೆ ಸಾಕು ಕೆಂಡದಂತಹ ವಾತಾವರಣ ಜನರನ್ನು ಹೈರಾಣಾಗಿಸುತ್ತಿದೆ. ಈ ಸುಡುವ ಬಿಸಿಲಿನಿಂದ ಪಾರಾಗಲು ಮತ್ತು ದೇಹವನ್ನು ತಂಪಾಗಿಸಿಕೊಳ್ಳಲು ಜನರು ಐಸ್‌ಕ್ರೀಂ ಹಾಗೂ ಕೂಲ್ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿದ ಬೇಡಿಕೆ, ಹೆಚ್ಚಿದ ಆತಂಕ

ನಗರದ ಗರಿಷ್ಠ ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಐಸ್‌ಕ್ರೀಂ ಪಾರ್ಲರ್‌ ಹಾಗೂ ತಂಪು ಪಾನೀಯಗಳ ಅಂಗಡಿಗಳ ಮುಂದೆ ಜನವೋ ಜನ. ದಣಿವು ಆರಿಸಿಕೊಳ್ಳಲು ಜನರು ಅತಿಯಾಗಿ ತಂಪು ಪಾನೀಯಗಳನ್ನು ಕುಡಿಯುತ್ತಿದ್ದಾರೆ. ಆದರೆ ಇದು ತಾತ್ಕಾಲಿಕವಾಗಿ ತಂಪು ನೀಡಿದರೂ, ದೇಹದ ಆಂತರಿಕ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ವೈದ್ಯರ ಎಚ್ಚರಿಕೆ ಏನು?

ಈ ಕುರಿತು ಮಾಹಿತಿ ನೀಡಿರುವ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಮುರಳೀಧರ್, ‘ಹೊರಗಿನ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿದ್ದಾಗ ದೇಹಕ್ಕೆ ಅತಿ ತಣ್ಣನೆಯ ಆಹಾರ ಅಥವಾ ಪಾನೀಯ ಸೇರಿದರೆ ರೋಗನಿರೋಧಕ ಶಕ್ತಿ ಕುಂದಬಹುದು. ಇದರಿಂದ ಕೆಮ್ಮು, ನೆಗಡಿ, ಶೀತ ಮಾತ್ರವಲ್ಲದೆ ನ್ಯುಮೋನಿಯಾದಂತಹ ಗಂಭೀರ ಕಾಯಿಲೆಗಳಿಗೂ ಕಾರಣವಾಗಬಹುದು’ ಎಂದು ತಿಳಿಸಿದ್ದಾರೆ.

ನೈಸರ್ಗಿಕ ಪಾನೀಯಕ್ಕೆ ಒತ್ತು ನೀಡಿ

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಕೃತಕ ಪಾನೀಯಗಳಿಗಿಂತ ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳಿಗೆ ಆದ್ಯತೆ ನೀಡುವುದು ಉತ್ತಮ. ಐಸ್‌ಕ್ರೀಂ ಮತ್ತು ಕೂಲ್ ಡ್ರಿಂಕ್ಸ್‌ಗಳ ಸೇವನೆ ಮಿತವಾಗಿರಲಿ ಎಂಬುದು ವೈದ್ಯರ ಕಿವಿಮಾತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *