Headlines

ಬಿಜೆಪಿಯಿಂದ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ; ರಾಘವ್ ಚಡ್ಡಾ ಸೇರಿ 7 ಸಂಸದರ ರಾಜೀನಾಮೆಗೆ ಕೇಜ್ರಿವಾಲ್ ಪ್ರತಿಕ್ರಿಯೆ – Kannada News | Arvind Kejriwals First Reaction On Raghav Chadha and Other 6 AAP MPs Joinging BJP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ಒಂದರ ಹಿಂದೊಂದರಂತೆ ಹೊಡೆತಗಳು ಬೀಳುತ್ತಲೇ ಇವೆ. ಪಕ್ಷಕ್ಕೆ ನಿಯತ್ತಾಗಿರುವ ಅನೇಕ ನಾಯಕರು ಇದೀಗ ಆಮ್ ಆದ್ಮಿ ಪಕ್ಷದ (AAP) ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷದೊಳಗೆ ಅತೃಪ್ತರ ಬಣ ದೊಡ್ಡದಾಗುತ್ತಲೇ ಇದೆ. ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ಅವರನ್ನು ಕೇಜ್ರಿವಾಲ್ (Arvind Kejriwal) ವಜಾಗೊಳಿಸಿದ ನಂತರ ಪಕ್ಷದಲ್ಲೇ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ರಾಘವ್ ಚಡ್ಡಾ ಮಹತ್ವದ ನಿರ್ಧಾರ ತೆಗೆದುಕೊಂಡು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ಹಾಗಂತ ಅವರೊಬ್ಬರೇ ಪಕ್ಷ ಬಿಟ್ಟು ಹೋಗುತ್ತಿಲ್ಲ. ಆಪ್​​ನೊಳಗಿನ ಇನ್ನೂ 6 ರಾಜ್ಯಸಭಾ ಸದಸ್ಯರನ್ನು ಕೂಡ ತಮ್ಮೊಂದಿಗೆ ಕರೆದುಕೊಂಡು ಬಿಜೆಪಿಗೆ ಕಾಲಿಟ್ಟಿದ್ದಾರೆ. ಇದು ಅರವಿಂದ್ ಕೇಜ್ರಿವಾಲ್​ಗೆ ದೊಡ್ಡ ಆಘಾತ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.’ಬಿಜೆಪಿ ಮತ್ತೊಮ್ಮೆ ಪಂಜಾಬಿಗಳಿಗೆ ದ್ರೋಹ ಮಾಡಿದೆ’ ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ 10 ರಾಜ್ಯಸಭಾ ಸಂಸದರಲ್ಲಿ 7 ಮಂದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರುವುದಾಗಿ ಘೋಷಿಸಿದ ನಂತರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್​ಗೆ ಭಾರೀ ಹೊಡೆತ; 6 ಸಂಸದರೊಂದಿಗೆ ಆಮ್ ಆದ್ಮಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ರಾಘವ್ ಚಡ್ಡಾ

ರಾಘವ್ ಚಡ್ಡಾ ಜೊತೆಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ಬಿಟ್ಟು ಹೋಗಿದ್ದಾರೆ. ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದಾರೆ ಎಂದು ರಾಘವ್ ಚಡ್ಡಾ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.

“ರಾಜ್ಯಸಭೆಯಲ್ಲಿ 10 ಎಎಪಿ ಸಂಸದರಿದ್ದಾರೆ. ಅವರಲ್ಲಿ 2/3ಕ್ಕಿಂತ ಹೆಚ್ಚು ಜನರು ನಮ್ಮೊಂದಿಗಿದ್ದಾರೆ. ಅವರು ಸಹಿ ಮಾಡಿದ್ದಾರೆ. ಇಂದು ಬೆಳಿಗ್ಗೆ ನಾವು ಸಹಿ ಮಾಡಿದ ಪತ್ರ ಮತ್ತು ದಾಖಲೆಗಳನ್ನು ರಾಜ್ಯಸಭಾ ಅಧ್ಯಕ್ಷರಿಗೆ ಸಲ್ಲಿಸಿದ್ದೇವೆ. ಅವರಲ್ಲಿ ಮೂವರು ನಿಮ್ಮ ಮುಂದೆ ಇದ್ದಾರೆ. ಇವರು ಮಾತ್ರವಲ್ಲದೆ ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ, ವಿಕ್ರಮಜಿತ್ ಸಿಂಗ್ ಸಹ್ನಿ ಮತ್ತು ಸ್ವಾತಿ ಮಲಿವಾಲ್ ಕೂಡ ಬಿಜೆಪಿಗೆ ಸೇರಲಿದ್ದಾರೆ” ಎಂದು ರಾಘವ್ ಚಡ್ಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾ ವಜಾ

“ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂಸತ್ತಿನ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸುತ್ತೇವೆ ಮತ್ತು ಭಾರತೀಯ ಜನತಾ ಪಕ್ಷದೊಂದಿಗೆ (BJP) ವಿಲೀನಗೊಳ್ಳುತ್ತೇವೆ.” ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್, ರಾಜಿಂದರ್ ಗುಪ್ತಾ ಮತ್ತು ವಿಕ್ರಮ್‌ಜಿತ್ ಸಿಂಗ್ ಸಾಹ್ನಿ ಕೂಡ ಎಎಪಿ ತೊರೆದು ಬಿಜೆಪಿ ಸೇರಿದ್ದಾರೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *