ಬೆಂಗಳೂರು, ಏಪ್ರಿಲ್ 26: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ಅವರ ಮೇ 15 ರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಗುಡ್ ನ್ಯೂಸ್ನ ನಿರೀಕ್ಷೆಗಳು ಗರಿಗೆದರಿವೆ. ಆದರೆ, ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.ನಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ.
ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಅವರ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ