ಬೆಂಗಳೂರು, ಏಪ್ರಿಲ್ 30: ಬೆಂಗಳೂರು ನಗರದಲ್ಲಿ ಭಾರಿ ಗಾಳಿ ಮಳೆಯ ಪರಿಣಾಮ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ನಗರದಾದ್ಯಂತ 50ಕ್ಕೂ ಹೆಚ್ಚು ಬೃಹದಾಕಾರದ ಮರಗಳು ಧರೆಗುರುಳಿವೆ. ರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಮರ ಬಿದ್ದು, ಮೂರು ಆಟೋಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದೇ ರೀತಿ, ಬಸವನಗುಡಿಯ ವಿದ್ಯಾಪೀಠ ಸರ್ಕಲ್ ಬಳಿಯೂ ಬೃಹತ್ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ತಂತಿಗಳಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಮರಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾತ್ರಿ ಮರಗಳು ಬಿದ್ದಿದ್ದರೂ ಬೆಳಗ್ಗೆವರೆಗೂ ತೆರವು ಕಾರ್ಯಾಚರಣೆ ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ