ಬೆಂಗಳೂರು, (ಮೇ 05): ಉಂಡು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರಿಗೆ ದ್ರೋಹಬಗೆದಿರುವ ಘಟನೆ ನಡೆದಿದೆ. ಹೌದು…ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆದಿದ್ದ ಕಳ್ಳತನದ ಅಸಲಿಯತ್ತು ಹೊರಬಿದ್ದಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಅಂದರೆ 1.13 ಮೌಲ್ಯದಷ್ಟು ಚಿನ್ನವನ್ನು ಕದ್ದು ನೌಟಂಕಿ ಆಟವಾಡುತ್ತಿದ್ದವರನ್ನು ಶಿವಾಜಿನಗರ ಪೊಲೀಸರು ಬಂಧಿಸಿವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಮಾಡಿದ್ದು ಬೇರೆ ಯಾರೂ ಅಲ್ಲ. ಸಚಿವರ ತಾಯಿಯ ಸಂಬಂಧಿಕರು. ಸಂಬಂಧಿ ಸೈಯದ್ ಅಮೀರ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಸಚಿವ ಜಮೀರ್ ಅಹಮ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ.
- ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರಿಂದ ಇಬ್ಬರ ಬಂಧನ.
- ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು.
- ಟ್ರಾವೆಲ್ಸ್ ಬ್ಯುಸಿನೆಸ್ನಲ್ಲಿ ಲಾಸ್ ಆಗಿದ್ದಕ್ಕೆ ಕಳ್ಳತನ
ಸಚಿವರ ತಾಯಿ ಸಂಬಂಧಿಯಿಂದಲೇ ಕೃತ್ಯ
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ವರ್ಷಗಳಿಂದ ಗುಟ್ಟಾಗಿ ನಡೆದಿದ್ದ ಕಳ್ಳತನದ ಅಸಲಿಯತ್ತು ಹೊರಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮಿರ್ ಅಹ್ಮದ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಸೈಯದ್ ಅಮೀನ್, ಸಚಿವ ಜಮೀರ್ ತಾಯಿಯ ಹತ್ತಿರದ ಸಂಬಂಧಿ. ಈ ನಂಟಿನಿಂದಾಗಿ ಸಚಿವರ ಮನೆಗೆ ಈತನಿಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬಂದು ಒಳ್ಳೆಯವನಂತೆ ನಟಿಸುತ್ತಿದ್ದ ಅಮೀನ್, ಯಾರೂ ಇಲ್ಲದ ಸಮಯ ನೋಡಿ ಕಳೆದ 2025 ರಿಂದಲೂ ಹಂತ ಹಂತವಾಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಆಭರಣಗಳನ್ನು ಎಗರಿಸುವುದು ಈತನ ಚಾಳಿಯಾಗಿತ್ತು.
ಇದನ್ನೂ ನೋಡಿ: ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ
ಬಂಧಿತ ಸೈಯದ್ ಅಮೀನ್, ಸಚಿವ ಜಮೀರ್ ತಾಯಿಯ ಹತ್ತಿರದ ಸಂಬಂಧಿ. ಈ ನಂಟಿನಿಂದಾಗಿ ಸಚಿವರ ಮನೆಗೆ ಈತನಿಗೆ ಮುಕ್ತ ಪ್ರವೇಶವಿತ್ತು. ಪ್ರತಿದಿನ ಮನೆಗೆ ಬಂದು ಒಳ್ಳೆಯವನಂತೆ ನಟಿಸುತ್ತಿದ್ದ ಅಮೀನ್, ಯಾರೂ ಇಲ್ಲದ ಸಮಯ ನೋಡಿ ಕಳೆದ 2025 ರಿಂದಲೂ ಹಂತ ಹಂತವಾಗಿ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಆಭರಣಗಳನ್ನು ಎಗರಿಸುತ್ತಿದ್ದ. ಅದರಂತೆ ಸ್ನೇಹಿತ ಅಮೀರ್ ಅಹಮದ್ ಸಹಾಯ ಪಡೆದು ಸುಮಾರು 1 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಬಳಿಕ ಆಭರಣಗಳನ್ನು ಅಡವಿಟ್ಟು ಹಣ ಸಹ ಪಡೆದುಕೊಂಡಿದ್ರು. ಅಷ್ಟೇ ಅಲ್ಲದೆ, ಆ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡಿ ದೊಡ್ಡ ಲಾಭ ಗಳಿಸುವ ಕನಸು ಕಂಡಿದ್ದರು.
ಕಳ್ಳತನಕ್ಕೆ ಕಾರಣವೇನು?
ಆರೋಪಿಗಳು ಟ್ರಾವೆಲ್ ಬ್ಯುಸಿನೆಸ್ ನಡೆಸುತ್ತಿದ್ದರು. ಆದರೆ ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಇವರ ವ್ಯವಹಾರ ತೀವ್ರ ನಷ್ಟಕ್ಕೆ ಸಿಲುಕಿತ್ತು. ಕಳೆದುಕೊಂಡ ಹಣವನ್ನು ಮರಳಿ ಪಡೆಯಲು ಮತ್ತು ಸಾಲ ತೀರಿಸಲು ಇವರು ಹಣದ ಹಪಹಪಿಯಲ್ಲಿದ್ದರು. ಎಲ್ಲಿಯೂ ಫೈನಾನ್ಸ್ ಅಥವಾ ಸಾಲ ಸಿಗದಿದ್ದಾಗ, ಅಂತಿಮವಾಗಿ ತಮ್ಮದೇ ಸಂಬಂಧಿಯಾದ ಸಚಿವರ ಮನೆಯ ಮೇಲೆ ಕಣ್ಣು ಹಾಕಿದ್ದರು. ಕಳೆದೊಂದು ವರ್ಷದಿಂದ ಹಂತ ಹಂತವಾಗ ಮನೆಯಲ್ಲಿದ್ದ ಜಮೀರ್ ತಾಯಿ ಚಿನ್ನವನ್ನು ಕಳ್ಳತನ ಮಾಡಿದ್ದು, ಬಳಿಕ ಚಿನ್ನಾಭರಣಗಳನ್ನು ಅಡವಿಟ್ಟು ಆ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ದುರಾಲೋಚನೆ ಇವರದ್ದಾಗಿತ್ತು.
ಕಳ್ಳರು ಸಿಕ್ಕಿಬಿದ್ದಿದ್ಹೇಗೆ?
ಕಳ್ಳತನ ನಡೆದ ಮೇಲೆ ಆರೋಪಿ ಅಮೀನ್ ನಡವಳಿಕೆ ಬದಲಾಗಿದ್ದು ಪೊಲೀಸರಿಗೆ ಕ್ಲ್ಯೂ ನೀಡಿತ್ತು. ಆಗಾಗ ಜಮೀರ್ ಮನೆ ಬರುತ್ತಿದ್ದವನು ಕಳ್ಳತನವಾದ ನಂತರ ಬರುವುದನ್ನೇ ನಿಲ್ಲಿಸಿದ್ದ. ಸಚಿವರ ತಾಯಿ ಫೋನ್ ಮಾಡಿದರೂ ಸ್ವೀಕರಿಸದೆ ತಪ್ಪಿಸಿಕೊಳ್ಳುತ್ತಿದ್ದ.ಯಾವಾಗ ಇವನ ಮೊಬೈಲ್ ಸ್ವಿಚ್ ಆಫ್ ಆಯ್ತೋ, ಆಗ ಪೊಲೀಸರಿಗೆ ಇವನೇ ಆರೋಪಿ ಎಂಬುದು ಗೊತ್ತಾಗಿತ್ತು. ಸದ್ಯ ಕಾರ್ಯಾಚರಣೆ ನಡೆಸಿ ಇಬ್ಬರು ಖದೀಮರ ಹೆಡೆಮುರಿ ಕಟ್ಟಿರುವ ಪೊಲೀಸರ ವಿಚಾರಣೆ ವೇಳೆ ಈತ ತನ್ನ ಪಾಪದ ಪುರಾಣವನ್ನು ಬಿಚ್ಚಿಟ್ಟಿದ್ದಾನೆ. ಸದ್ಯ ಬಂಧಿತರಿಂದ ಒಟ್ಟು 759 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಒಟ್ಟಿನಲ್ಲಿ ನಂಬಿಕಸ್ಥನೇ ದ್ರೋಹ ಬಗೆದ ಈ ಘಟನೆ ಸಚಿವ ಜಮೀರ್ ಅಹಮದ್ ಖಾನ್ ಕುಟುಂಬವನ್ನೇ ದಂಗಾಗಿಸಿದೆ. ಸದ್ಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ.