ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಚುನಾವಣೆ ಗೆದ್ದು ಸರ್ಕಾರ ರಚಿಸುತ್ತಿದ್ದಾರೆ. ಅವರ ಈ ಗೆಲುವು ಹಲವರಿಗೆ ಸ್ಫೂರ್ತಿ ಆಗಿದೆ. ಈ ಬಗ್ಗೆ ನಟಿ ರಾಗಿಣಿ ದ್ವಿವೇದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಕೂಡ ವಿಜಯ್ ರೀತಿ ಬೇರೆ ಯಾವ ನಟರು ಚುನಾವಣೆಯಲ್ಲಿ ನಿಲ್ಲಬಹುದು ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan), ಸುದೀಪ್, ಯಶ್ ಮುಂತಾದವರ ಹೆಸರು ಹೇಳಿಬರುತ್ತಿದೆ. ‘ಮನಸ್ಸು ಮಾಡಿದರೆ ಯಾರು ಏನು ಬೇಕಾದರೂ ಮಾಡಬಹುದು. ಈ ಎಲ್ಲ ನಟರಿಗೂ ಸಾಮರ್ಥ್ಯ ಇದೆ. ಒಳ್ಳೆಯ ಮನಸ್ಸಿನಿಂದ ಮಾಡಿದರೆ ಸಾಧ್ಯ ಆಗುತ್ತದೆ’ ಎಂದು ರಾಗಿಣಿ ದ್ವಿವೇದಿ (Ragini Dwivedi) ಹೇಳಿದ್ದಾರೆ. ರಾಜಕೀಯದ ಬಗ್ಗೆ ತಮ್ಮ ನಿಲುವು ಏನು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ರಾಗಿಣಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.