Headlines

ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar

ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್​​ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್​ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮಂಜ್ರೇಕರ್ ಅವರ ವಿಶ್ಲೇಷಣೆ ಏನು?

ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ ಚೆಂಡನ್ನು ಪಾಯಿಂಟ್ ದಿಕ್ಕಿನತ್ತ ಬಾರಿಸುವುದು ಇವರ ಶೈಲಿ. ಇದು ಟಿ20 ಕ್ರಿಕೆಟ್‌ನಲ್ಲಿ ರನ್ ಗಳಿಸಲು ಸಹಕಾರಿ.

ಆದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಇಂತಹ ಬ್ಯಾಟಿಂಗ್ ಅಸಾಧ್ಯ. ಇಂಗ್ಲೆಂಡ್, ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾದಂತಹ ದೇಶಗಳಲ್ಲಿ ಚೆಂಡಿನಿಂದ ದೂರ ನಿಂತು ಬ್ಯಾಟ್ ಮಾಡಿದರೆ 20 ರನ್ ಗಳಿಸುವುದು ಕೂಡ ಕಷ್ಟ ಎಂದು ಸಂಜಯ್ ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಚೆಂಡಿನ ಸಾಲಿಗೆ ಅಂದರೆ ಲೈನ್ ಆಫ್ ದಿ ಬಾಲ್​​ ಹತ್ತಿರ ಹೋಗಿ ಆಡುವುದು ಅತ್ಯಗತ್ಯ. ಇದೀಗ ವೈಭವ್ ಸೂರ್ಯವಂಶಿ ಆಡುತ್ತಿರುವುದು ಲೆಗ್ ಸೈಡ್ ಆಫ್​ ದಿ ಬಾಲ್​ ಸಾಲಿನಲ್ಲಿ. ಈ ಶೈಲಿಯು ಟಿ20 ಕ್ರಿಕೆಟ್​​ಗೆ ಓಕೆ. ಆದರೆ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್​ನ ವೇಗದ ಪಿಚ್​ಗಳಲ್ಲಿ ಈ ರೀತಿಯಾಗಿ ನಿಂತು ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ.

ಅಲ್ಲದೆ ವೈಭವ್ ಸೂರ್ಯವಂಶಿ ಲೆಗ್ ಸೈಡ್ ಆಫ್​ ದಿ ಬಾಲ್​ ಸಾಲಿನಲ್ಲೇ ನಿಂತು ಬ್ಯಾಟ್ ಮಾಡುವುದನ್ನು ಮುಂದುವರೆಸಿದರೆ ಅದು ಮುಂದೆ ಅವರ ಕೆರಿಯರ್ ಮೇಲೆ ಪರಿಣಾಮ ಬೀರಲಿದೆ. ಏಕೆಂದರೆ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್​ ಪಿಚ್​​ನಲ್ಲಿ ಈ ರೀತಿಯಾಗಿ ಬ್ಯಾಟ್ ಮಾಡಿದರೆ 20 ರನ್​ಗಳಿಸುವುದು ಕೂಡ ಕಷ್ಟ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

ಟೀಮನ್ ಇಂಡಿಯಾ ಕಾಲಿಂಗ್:

ಒಂದೆಡೆ ಸಂಜಯ್ ಮಂಜ್ರೇಕರ್ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಹುಳುಕುಗಳನ್ನು ತೆರೆದಿಟ್ಟರೆ, ಮತ್ತೊಂದೆಡೆ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ವೈಭವ್ ಸೂರ್ಯವಂಶಿಯನ್ನು ಶೀಘ್ರವೇ ಭಾರತ ಟಿ20 ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ಹೇಳಿದ್ದಾರೆ.

ಇದನ್ನೂ ಓದಿ: ನಿತೀಶ್ ರಾಣಾ ‘ಔಟ್’ ಗೊಂದಲ: ಐಪಿಎಲ್ ನಿಯಮ ಏನು ಹೇಳುತ್ತೆ?

ಇದೇ ವೇಳೆ ಟಿ20 ಕ್ರಿಕೆಟ್ ಹಣ ಮತ್ತು ಪ್ರಸಿದ್ಧಿಯನ್ನು ತಂದುಕೊಡಬಹುದು, ಆದರೆ ವಿಮರ್ಶಕರಿಂದ “ಗೌರವ” ಸಿಗುವುದು ಟೆಸ್ಟ್ ಕ್ರಿಕೆಟ್‌ನಲ್ಲಿ ತೋರುವ ತಾಂತ್ರಿಕ ಪ್ರೌಢಿಮೆಯಿಂದ ಮಾತ್ರ. ಹೀಗಾಗಿ ವೈಭವ್ ಸೂರ್ಯವಂಶಿ ಟೆಸ್ಟ್ ಕ್ರಿಕೆಟ್ ಅನ್ನು ಕೂಡ ಗಂಭೀರವಾಗಿ ಪರಿಗಣಿಸಬೇಕೆಂಬುದು ಸಂಜಯ್ ಮಂಜ್ರೇಕರ್ ಅವರ ಕಿವಿಮಾತು.

Source link

Leave a Reply

Your email address will not be published. Required fields are marked *