ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್ ಕಳವು ಮಾಡಿದ ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಈ ದೊಡ್ಡ ಜಾಲ ಪತ್ತೆಯಾಗಿದೆ. ಇತ್ತೀಚೆಗೆ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.
ಬಂಧಿತರು ಕೇವಲ ಹೊಸಕೋಟೆ ಮಾತ್ರವಲ್ಲದೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆ.ಆರ್. ಪುರ ಮತ್ತು ಕಾಡುಗೋಡಿ ಭಾಗಗಳಲ್ಲಿಯೂ ತಮ್ಮ ಕೈಚಳಕ ತೋರಿಸುತ್ತಿದ್ದರು. ಪ್ರಸ್ತುತ ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಹೊಸಕೋಟೆ ಪೊಲೀಸರು ಇಬ್ಬರನ್ನೂ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ