ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್ಗೆ ಒಂದು ವರ್ಷ!
ಬೆಂಗಳೂರು, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikar) ಆಪ್ತ ಸಹಾಯಕ ಚಂದ್ರನಾಥ್ ರಥ್ ಗುಂಡೇಟಿಗೆ ಬಲಿಯಾಗಿದ್ದಾರೆ. ಆಪರೇಷನ್ ಸಿಂಧೂರ್ಗೆ ಒಂದು ವರ್ಷ ಪೂರೈಸಿದ್ದು, ಭಾರತೀಯ ಸೇನೆಯು ವಿಶೇಷ ವೀಡಿಯೋವನ್ನು ಹಂಚಿಕೊಂಡಿದೆ. ಇನ್ನೊಂದೆಡೆ ರೈಲ್ವೆ ಇಲಾಖೆ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಕನ್ನಡ ಬಾಷೆಯನ್ನು ನಿರಾಕರಿಸಲಾಗಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎನ್ನಿಸಿಕೊಂಡು ದಾಖಲೆ ಸೃಷ್ಟಿಸಿದ್ದಾರೆ.
ಮುಖ್ಯಾಂಶಗಳು
- ಸುವೇಂದು ಅಧಿಕಾರಿಯ ಆಪ್ತ ಸಲಹೆಗಾರ ಗಂಡೇಟಿಗೆ ಬಲಿ
- ಆಪರೇಷನ್ ಸಿಂಧೂರ್ ನೆನಪಿಗೆ ಭಾರತೀಯ ಸೇನೆಯಿಂದ ವೀಡಿಯೋ ರಿಲೀಸ್
- ರೈಲ್ವೇ ಪರೀಕ್ಷೆಗಳಲ್ಲಿ ಕನ್ನಡಕ್ಕೆ ನಿರಾಕರಣೆ
- ದೇಶದಲ್ಲೆ ಹಿರಿಯ ಮುಖ್ಯಮಂತ್ರಿಯಾದ ಸಿಎಂ ಸಿದ್ದರಾಮಯ್ಯ
ಸುವೇಂದು ಅಧಿಕಾರಿಯ ಪಿಎ ಹತ್ಯೆ!
ಪಶ್ಚಿಮ ಬಂಗಾಳದ ವಿವಿಧೆಡೆ ಭೀಕರ ಹಿಂಸಾಚಾರ ಭುಗಿಲೆದ್ದಿದ್ದು, ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ನಡೆದಿರುವ ಈ ಘಟನೆಯು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಆಪರೇಷನ್ ಸಿಂಧೂರ್ಗೆ ಒಂದು ವರ್ಷ
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದ ಶಕ್ತಿಗಳ ವಿರುದ್ಧ ನಡೆದಿದ್ದ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಅಂದಿನ ಭೀಕರ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ. ಭಾರತದ ಮೇಲೆ ಕಣ್ಣು ಹಾಕುವ ಅಥವಾ ಭಯೋತ್ಪಾದನೆಗೆ ನೀರೆರೆಯುವ ಶಕ್ತಿಗಳು ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿದ್ದರೂ ಸರಿ, ಭಾರತೀಯ ಸೇನೆ ಅವರನ್ನು ಹುಡುಕಿ ಶಿಕ್ಷಿಸುತ್ತದೆ ಎಂಬ ಸಂದೇಶವನ್ನು ವೀಡಿಯೋದಲ್ಲಿ ನೀಡಲಾಗಿದೆ.
ಇದನ್ನೂ ಓದಿ ಮಾವು, ಹಲಸು ಪ್ರಿಯರಿಗೆ ಈ ಬಾರಿ ಡಬ್ಬಲ್ ಧಮಾಕ! ಬೆಂಗಳೂರಿನ ಎರಡು ಕಡೆ ‘ಮಾವು ಮತ್ತು ಹಲಸಿನ ಮೇಳ’
ರೈಲ್ವೆ ಪರಿಕ್ಷೇಗಳಲ್ಲಿ ಕನ್ನಡಕ್ಕಿಲ್ಲ ಜಾಗ!
ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ತಿರಸ್ಕರಿಸಲಾಗಿದೆ. ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಇಲಾಖೆಯ ಈ ಕ್ರಮದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ ರೈಲು ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ.
ಸಿದ್ದರಾಮಯ್ಯ ದೇಶದ ಅತ್ಯಂತ ಹಿರಿಯ ಸಿಎಂ
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್ಡಿಎಫ್ ಸೋಲುಂಡ ಕಾರಣ 80 ವರ್ಷ ವಯಸ್ಸಿನ ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿಣರಾಯಿ ವಿಜಯನ್ ನಂತರ ಕರ್ನಾಟಕದ ಮುಖ್ಯಮಂತ್ರಿ, 78 ವರ್ಷ ವಯಸ್ಸಿನ ಸಿದ್ದರಾಮಯ್ಯ ಈಗ ದೇಶದ ಅತ್ಯಂತ ಹಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ