ಉಡುಪಿ, ಮೇ 07: ಬಿಸಿಲಿನ ತಾಪಕ್ಕೆ ತೀವ್ರವಾಗಿ ತತ್ತರಿಸಿದ್ದ ಪೊಡವಿಗೊಡೆಯನ ನಾಡು ಉಡುಪಿಯ ಜನಕ್ಕೆ ವರುಣ ತಂಪೆರೆದಿದ್ದಾನೆ. ಮುಂಜಾನೆಯಿಂದಲೆ ಜಿಲ್ಲೆಯ ಹಲವು ಕಡೆ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಗೆ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗ ನಡೆದಿದೆ. ಉಡುಪಿ ನಗರದಲ್ಲಿಯೂ ಉತ್ತಮ ಮಳೆಯಾದ ಪರಿಣಾಮ ಮಣಿಪಾಲ ರಸ್ತೆಯ ಕೆಲವೆಡೆ ರಸ್ತೆಯಲ್ಲಿಯೇ ಹಳ್ಳದ ರೀತಿ ನೀರು ಹರಿದಿರುವ ದೃಶ್ಯಗಳು ಕಂಡುಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.