Headlines

ಪಡಿತರ ಅಕ್ಕಿ ಕಳ್ಳ ಸಾಗಾಣೆದಾರರಿಂದ 3 ಲಕ್ಷ ರೂ. ವಸೂಲಿ! ಬಳ್ಳಾರಿ ಎಸ್ಪಿ ಗನ್ ಮ್ಯಾನ್ ಅಂದರ್ – Kannada News | Ballari SP Gunman Arrested for Extorting Money from Illegal Ration Rice Smugglers

ಬಳ್ಳಾರಿ, ಮೇ 08: ಜಿಲ್ಲೆಯಲ್ಲಿಅಕ್ರಮ ಪಡಿತರ ಅಕ್ಕಿ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ (Ballary) ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ದೇವರಾಜ್ ಬಂಧನಕ್ಕೊಳಗಾಗಿರುವ ಘಟನೆ ಸಂಚಲನ ಮೂಡಿಸಿದೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ದೇವರಾಜ್ ಹಾಗೂ ಆತನ ಸಹಚರರನ್ನು ಮೋಕಾ ಪೊಲೀಸರು ಬಂಧಿಸಿದ್ದಾರೆ.

ಮುಖ್ಯಾಂಶಗಳು

  • ಬಳ್ಳಾರಿ ಎಸ್ಪಿ ಗನ್ ಮ್ಯಾನ್ ದೇವರಾಜ್ ಅಕ್ರಮ ಅಕ್ಕಿ ಸಾಗಾಣಿಕೆದಾರರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧನ.
  • ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಲಾರಿಗಳನ್ನು ಅಡ್ಡಗಟ್ಟಿ ಐದು ಲಕ್ಷ ರೂ. ಬೇಡಿಕೆಯಿಟ್ಟು, ಮೂರು ಲಕ್ಷ ರೂ. ಸುಲಿಗೆ.
  • ಖುದ್ದು ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಸೂಚನೆ ಮೇರೆಗೆ ಗನ್ ಮ್ಯಾನ್ ದೇವರಾಜ್ ಮತ್ತು ಸಹಚರರ ವಿಚಾರಣೆ.

ನಡೆದಿದ್ದೇನು?

ಮಡಕೇರಿಯಿಂದ ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ತುಂಬಿಕೊಂಡು ತೆರಳುತ್ತಿದ್ದ ಎರಡು ಲಾರಿಗಳನ್ನು ಅಡ್ಡಗಟ್ಟಿದ್ದ ಆರೋಪಿಗಳು, ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿ ಐದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಳಿಕ ಮೂರು ಲಕ್ಷ ರೂ. ವಸೂಲಿ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಯೆಂದು ಶರಭಯ್ಯ ಮೋಕಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ!

ಆರೋಪಿಗಳ ವಿಚಾರಣೆ

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಗನ್ ಮ್ಯಾನ್ ದೇವರಾಜ್ ಎಸ್ಪಿ ಸ್ಕ್ವಾಡ್ ಹೆಸರಿನಲ್ಲಿ ಹಣ ವಸೂಲಿ ಮಾಡಿರುವುದು ಖಚಿತವಾಗಿದೆ. ಈ ಹಿನ್ನೆಲೆ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರೇ ಕ್ರಮ ಕೈಗೊಂಡು ದೇವರಾಜ್ ಬಂಧನಕ್ಕೆ ಸೂಚನೆ ನೀಡಿದ್ದಾರೆ. ಸದ್ಯ ಮೋಕಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *