
ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್ಗಳನ್ನು ಪರಿಶೀಲಿಸಲಾಗುತ್ತಿದ್ದು, ಓರ್ವ ವ್ಯಕ್ತಿ ಬಾಕ್ಸ್ನ್ನು ಇಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೋರಮಂಗಲ ಪೊಲೀಸರು ಬಂಧಿಸಿರುವ ಲೋಹಿತ್ ಎಂಬಾತನಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎನ್ನಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.