ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಮಾತನಾಡಿದ್ದು, ಇಂಧನ ದರ ಏರಿಕೆಯಾಗಲಿದೆ ಎಂದಿದ್ದಾರೆ.