Headlines

ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಮಧುಬಂಗಾರಪ್ಪ ಹೇಳಿದ್ದೇನು ಗೊತ್ತಾ? – Kannada News | Madhu Bangarappa talks about Kesari Shawl after Governmnet Allowed Hijab In Schools

ಬೆಂಗಳೂರು, (ಮೇ 13): ಕರ್ನಾಟಕ ಸರ್ಕಾರವು (Karnataka Governmnet)  2022ರ ಹಿಜಾಬ್ (Hijab) ನಿಷೇಧ ಆದೇಶವನ್ನು ಅಧಿಕೃತವಾಗಿ ಹಿಂಪಡೆದಿದೆ. ಹೊಸ ಮಾರ್ಗಸೂಚಿಯ ಅನ್ವಯ, ವಿದ್ಯಾರ್ಥಿನಿಯರು ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡಲಾಗಿದ್ದು, ಈ ನಿಯಮವು ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಅನ್ವಯವಾಗಲಿದೆ. ಇಂದು (ಮೇ 13) ಹೊಸ ವಸ್ತ್ರಸಂಹಿತೆ ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ‘ಹಿಜಾಬ್’ (ತಲೆವಸ್ತ್ರ) ಧರಿಸಲು ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಜನಿವಾರ ಮತ್ತು ಹಿಜಾಬ್ (Hijab) ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದ್ರೆ, ಸರ್ಕಾರದ ಆದೇಶದಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇದೆಯೋ, ಇಲ್ಲವೋ ಎಂದು ಸ್ಪಷ್ಟತೆ ಇಲ್ಲ. ಹೀಗಾಗಿ ಗೊಂದಲವಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 2022ರ ಆದೇಶ ಹಿಂಪಡೆದ ಸರ್ಕಾರ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ

Source link

Leave a Reply

Your email address will not be published. Required fields are marked *