ಬೆಂಗಳೂರಲ್ಲಿ ಸುರಿದ ಮಳೆImage Credit source: Tv9 Kannada
ಬೆಂಗಳೂರು, ಮೇ 18: ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ನಾಳೆ (ಮೇ 19) ಮಳೆಯಾಗಲಿದ್ದು, ಆ ಪೈಕಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಖ್ಯಾಂಶಗಳು
- ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳು ಮಳೆ
- ಭಾರೀ ಮಳೆ ಜೊತೆಗೆ ಗುಡುಗು-ಮಿಂಚು & ಬಿರುಗಾಳಿ ಸಾಧ್ಯತೆ
- ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ
ಎಲ್ಲೆಲ್ಲಿ ಮಳೆ ಅಬ್ಬರ?
ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ನೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ; ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಪರದಾಟ
ಮುಂದಿನ 7 ದಿನಗಳು ಮಳೆ ಸಾಧ್ಯತೆ
ಉತ್ತರ ಒಳನಾಡು ಭಾಗದಲ್ಲಿ ಮೇ 21ರವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ನಿರೀಕ್ಷೆಯಿದ್ದು, ಬಳಿಕ ಹವಾಮಾನದಲ್ಲಿ ಸ್ವಲ್ಪ ಸುಧಾರಣೆ ಕಾಣಬಹುದು. ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯೊಂದಿಗೆ ಗುಡುಗು-ಮಿಂಚಿನ ಸಾಧ್ಯತೆ ಇದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ, ಮಧ್ಯಾಹ್ನದ ಬಳಿಕ ಮೋಡಗಟ್ಟುವಿಕೆ ಹಾಗೂ ಸಂಜೆ ವೇಳೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.