Headlines

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ? – Kannada News | Ballari Banner Dispute: Who Fired the Fatal Shot That Killed Rajasekhar?

ಬ್ಯಾನರ್​​ ಗಲಾಟೆವೇಳೆ ಗುಂಡೇಟಿಗೆ ಯುವಕ ಬಲಿ.

ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್​​ ರೆಡ್ಡಿ ಕಿಡಿಕಾರಿದ್ದಾರೆ. ಇದೆಲ್ಲದರ ನಡುವೆ ಯುವಕ ರಾಜಶೇಖರ್​​ ಸಾವಿಗೆ ಕಾರಣವಾದ ಬುಲೆಟ್ ಫೈರ್​​ ಮಾಡಿದ್ದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಬ್ಯಾನರ್​​ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜೊತೆಗೆ ಶಾಸಕ ಭರತ್​​ ರೆಡ್ಡಿ ಆಪ್ತನ ಬಾಡಿಗಾರ್ಡ್​​ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ​ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಖಾಸಗಿ ಗನ್​ಮ್ಯಾನ್​​ಗಳ 3 ಗನ್​ ಸೀಜ್ ಮಾಡಿದ್ದಾರೆ. ಅವುಗಳನ್ನು ಪರಿಶೀಲನೆಗಾಗಿ FSLಗೆ ಕಳುಹಿಸಲಾಗಿದೆ. ಜನಾರ್ದನರೆಡ್ಡಿಗೆ ನೀಡಿದ್ದ ಗನ್​ಮ್ಯಾನ್​ಗಳ ಗನ್​ ಸಹ ಪರಿಶೀಲನೆ ನಡೆಸಲಾಗಿದ್ದು, ರೆಡ್ಡಿ ಗನ್​ಮ್ಯಾನ್​ಗಳ ಗನ್​ನಿಂದ ಬುಲೆಟ್​ ಬಳಕೆ ಆಗದಿರುವುದು ಪತ್ತೆಯಾಗಿದೆ ಎಂದು ಟಿವಿ9ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಘರ್ಷಣೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರವಾಗಿ ಗಲಾಟೆಯಾಗಿದೆ. ಮನೆಯ ರಸ್ತೆಯಲ್ಲಿ ಬ್ಯಾನರ್ ಹಾಕಲು ಜನಾರ್ದನರೆಡ್ಡಿ ವಿರೋಧಿಸಿದ್ದಾರೆ ಎನ್ನಲಾಗಿದೆ. ಆ ವಿಚಾರಕ್ಕೆ ಗಲಾಟೆ ನಡೆದು, ಕಾಂಗ್ರೆಸ್​ನ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾನೆ. ಆ ವೇಳೆ ಯಾರು ಫೈರ್ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇನೆ. ಆ ಬಗ್ಗೆ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆಯಾಗಿ ದಾವಣಗೆರೆ ಐಜಿ ಘಟನಾ ಸ್ಥಳಕ್ಕೆ ಹೋಗಿದ್ದು, ಖಾಸಗಿ ಗನ್ ಮ್ಯಾನ್​ಗಳ ರಿವಾಲ್ವಾರ್​ಗಳನ್ನು ಸೀಜ್ ಮಾಡಿದ್ದಾರೆ. ಸತೀಶ್ ರೆಡ್ಡಿ ಗನ್​ಮ್ಯಾನ್ ಫೈರ್ ಮಾಡಿದ್ದಾರೆ ಅಂತಾ ಹೇಳ್ತಿದ್ದಾರೆ. ಅದರ ಬಗ್ಗೆಯೂ ತನಿಖೆ ಆಗಬೇಕು. ಗಲಾಟೆ ಮಾಡಿದ ವಿಚಾರಕ್ಕೆ ಜನಾರ್ದನ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್ ಆಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *