ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.