Headlines

ಭಟ್ಕಳ: ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ – Kannada News | Bhatkal Moori Katte Controversy: Police Attacked After Structure Demolished by Muslim Leaders

ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮೂರಿಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ನಡೆದಿದೆ. ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮೂರಿಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮೂರಿಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಆದರೆ, ಈ ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಂ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು ಹಾಗೂ ಕಟ್ಟೆಯನ್ನು ತಕ್ಷಣವೇ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದರು. ಜಾಗಟೆ ಕಟ್ಟೆ ಬಳಿ ಏಕಾಏಕಿ ಜಮಾಯಿಸಿದ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು, ಬೆಳಿಗ್ಗೆ ನಿರ್ಮಿಸಲಾಗಿದ್ದ ಮೂರಿಕಟ್ಟೆಯನ್ನು ಒಡೆದು ಹಾಕಿದ್ದಾರೆ. ಈ ವೇಳೆ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನು ನಿಯಂತ್ರಿಸಲು ಮುಂದಾದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *