ಊಹಾಪೋಹಗಳಿಗೆ ತೆರೆ: ಚುನಾವಣಾ ಸಂಬಂಧಿ ಚರ್ಚೆಗಷ್ಟೇ ಸೀಮಿತವಾಯ್ತಾ ಕಾಂಗ್ರೆಸಿಗರ ಹೈವೋಲ್ಟೇಜ್​​ ಮೀಟಿಂಗ್​? – Kannada News | KC Venugopal Denies Karnataka Leadership Change Buzz, Says High Command Meet Focused Only on Elections

ಕಾಂಗ್ರೆಸಿಗರ ಜಂಟಿ ಸುದ್ದಿಗೋಷ್ಠಿImage Credit source: Tv9 Kannada

ನವದೆಹಲಿ, ಮೇ 26: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರ ಜೊತೆಗಿನ ಸುದೀರ್ಘ ಸಭೆ ಬಳಿಕ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಸುದೀರ್ಘ ಸಭೆ ಹಿಂದಿನ ಕಾರಣವನ್ನು ರಿವೀಲ್​​ ಮಾಡಿದ್ದಾರೆ. ರಾಜ್ಯ ನಾಯಕರಿಗೆ ಹೈಕಮಾಂಡ್​​ನಿಂದ ದಿಢೀರ್​​ ಬುಲಾವ್​​ ಬಂದಿದ್ದ ಹಿನ್ನೆಲೆ ನಾಯಕತ್ವ ಬದಲಾವಣೆ ಸೇರಿ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಾಯಕರು ಈ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಸಭೆಯಲ್ಲೆ ಚರ್ಚೆಯಾಗಿದ್ದೇನು?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್​​ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​ ಸಮ್ಮುಖದಲ್ಲಿ ಇವತ್ತು ದೆಹಲಿಯಲ್ಲಿ ಹೈವೋಲ್ಟೇಜ್​​ ಮೀಟಿಂಗ್​​ ನಡೆದಿತ್ತು. ಹೀಗಾಗಿ ವರಿಷ್ಠರು ಸದ್ಯ ಪಕ್ಷದಲ್ಲಿರುವ ಎಲ್ಲ ಗೊಂದಲಗಳಿಗೂ ತೆರೆ ಎಳೆಯಬಹುದೆಂಬ ನಿರೀಕ್ಷೆ ಇತ್ತು. ಆದರೆ ಸಭೆ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯಸಭೆ ಮತ್ತು ವಿಧಾನಪರಿಷತ್​ ಚುನಾವಣೆ ಬಗ್ಗೆ ಮಾತ್ರ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್​ನಲ್ಲಿ ಯಾವುದೇ ಗೊಂದಲ ಇಲ್ಲ. ಚುನಾವಣೆ ಸಂಬಂಧ ಮಾತ್ರ ಸಿಎಂ, ಡಿಸಿಎಂ ಜತೆ ಮಾತುಕತೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Source link

Leave a Reply

Your email address will not be published. Required fields are marked *