Headlines

ಒಳನುಸುಳುವಿಕೆ, ಜನಸಂಖ್ಯೆ ಬದಲಾವಣೆ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ; ಅಮಿತ್ ಶಾ ಘೋಷಣೆ – Kannada News | Amit Shah announced high level committee to examine demographic change in India

ನವದೆಹಲಿ, ಮೇ 26: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನಸಂಖ್ಯೆಯಲ್ಲಿ ಆಗುತ್ತಿರುವ ಆತಂಕಕಾರಿ ಬದಲಾವಣೆಗಳು ಮತ್ತು ಒಳನುಸುಳುವಿಕೆ (Infiltration) ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಈ ಸಮಸ್ಯೆಯನ್ನು ಎದುರಿಸಲು ವಿಶೇಷ ಸಮಿತಿಯೊಂದನ್ನು ರಚಿಸಿರುವುದಾಗಿ ಘೋಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಭದ್ರತಾ ಸಭೆಯೊಂದರಲ್ಲಿ ಮಾತನಾಡಿದ ಅಮಿತ್ ಶಾ, ಭಾರತದ ಗಡಿಭಾಗದ ಮೂಲಕ ನಡೆಯುತ್ತಿರುವ ಅಕ್ರಮ ಒಳನುಸುಳುವಿಕೆ ದೇಶದ ಆಂತರಿಕ ಭದ್ರತೆಗೆ ಮತ್ತು ಸಾಮಾಜಿಕ ಸಮತೋಲನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಒಳನುಸುಳುವಿಕೆ ಗಡಿ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯ ಮೇಲೂ ಪ್ರಭಾವ ಬೀರುತ್ತಿದೆ ಎಂದು ಅಮಿತ್ ಶಾ ಬೇಸರ ವ್ಯಕ್ತಪಡಿಸಿದರು. ಹಾಗೇ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮತ್ತು ಗಡಿಭಾಗದ ಜಿಲ್ಲೆಗಳಲ್ಲಿ ಜನಸಂಖ್ಯೆಯ ಅನುಪಾತವು ತೀರಾ ಅಸಹಜವಾದ ರೀತಿಯಲ್ಲಿ ಬದಲಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಅಸಹಜ ಜನಸಂಖ್ಯಾ ಬದಲಾವಣೆಯ ಹಿಂದಿನ ನಿಖರವಾದ ಕಾರಣಗಳು, ನುಸುಳುವಿಕೆಯ ಪ್ರಮಾಣ ಮತ್ತು ಅದರ ಭೌಗೋಳಿಕ ಪ್ರಭಾವಗಳನ್ನು ಆಳವಾಗಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರವು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ

ಈ ಸಮಿತಿಯು ಗಡಿಭಾಗದ ಜಿಲ್ಲೆಗಳಲ್ಲಿ ಜನಸಂಖ್ಯೆಯ ಡೇಟಾ ಪರಿಶೀಲಿಸಲಿದೆ. ಅಕ್ರಮವಾಗಿ ವಲಸೆ ಬಂದು ನೆಲೆಸಿರುವವರನ್ನು ಪತ್ತೆಹಚ್ಚಲು ಹಾಗೂ ಗಡಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರಕ್ಕೆ ಅಗತ್ಯ ಶಿಫಾರಸುಗಳನ್ನು ನೀಡಲಿದೆ. ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಯಲು ಗಡಿ ಭದ್ರತಾ ಪಡೆಗಳಿಗೆ (BSF ಮತ್ತು ಇತರ ರಕ್ಷಣಾ ಸಂಸ್ಥೆಗಳಿಗೆ) ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ಅಮಿತ್ ಶಾ ಅವರ ಪೋಸ್ಟ್ ಇಲ್ಲಿದೆ:

ಗಡಿಭಾಗಗಳಲ್ಲಿ ತಂತ್ರಜ್ಞಾನ ಆಧಾರಿತ ಕಣ್ಗಾವಲು, ಡ್ರೋನ್ ಬಳಕೆಯ ಹೆಚ್ಚಳ ಮತ್ತು ಫೆನ್ಸಿಂಗ್ ಕಾರ್ಯಗಳನ್ನು ಚುರುಕುಗೊಳಿಸಲು ಆದೇಶಿಸಲಾಗಿದೆ ಎಂದಿದ್ದಾರೆ. ಯಾವುದೇ ರಾಜಕೀಯ ಅಥವಾ ಪ್ರಾದೇಶಿಕ ಒತ್ತಡಗಳಿಗೆ ಮಣಿಯದೆ, ದೇಶದ ಸುರಕ್ಷತೆಯ ಹಿತದೃಷ್ಟಿಯಿಂದ ಅಕ್ರಮ ವಲಸಿಗರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಮಿತ್ ಶಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಮೇ 5ರ ನಂತರ ಹೆಣ್ಣುಮಕ್ಕಳು ಭಯವಿಲ್ಲದೆ ಮಧ್ಯರಾತ್ರಿ 1 ಗಂಟೆಗೂ ಹೊರಗೆ ಓಡಾಡಬಹುದು; ಅಮಿತ್ ಶಾ ಭರವಸೆ

ಅಮಿತ್ ಶಾ ಅವರ ಈ ಘೋಷಣೆಯು ದೇಶದ ಭದ್ರತಾ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಗಡಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಈಶಾನ್ಯ ಭಾರತದ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ವಲಸೆಯ ವಿರುದ್ಧ ಕೇಂದ್ರ ಸರ್ಕಾರ ಭಾರಿ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದೆ ಎಂಬುದರ ಮುನ್ಸೂಚನೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *