Headlines

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ರಣದೀಪ್​​ ಸುರ್ಜೇವಾಲImage Credit source: Tv9 Kannada

ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮಾತ್ರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮುಖ್ಯಾಂಶಗಳು

  • ಸಿಎಂ ಸ್ಥಾನಕ್ಕೆ ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಚರ್ಚೆ
  • ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಗರಿಗೆದರಿರುವ ರಾಜಕೀಯ ಚಟುವಟಿಕೆ
  • ಈ ನಡುವೆ ಅಚ್ಚರಿಯ ಹೇಳಿಕೆ ಕೊಟ್ಟ ರಾಜ್ಯ ಕಾಂಗ್ರೆಸ್​​ ಉಸ್ತುವಾರಿ!

ಸುರ್ಜೇವಾಲ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲವೆಂದು ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ವಿಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದ ಸಿದ್ದರಾಮಯ್ಯನವರು, 2ನೇ ಬಾರಿಗೆ ಸಿಎಂ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಹಲವು ಸಿಎಂಗಳ ಜೊತೆ ಸಚಿವರಾಗಿ ಕೆಲಸ ಮಾಡಿದ್ದು,
ಅವರು ಸಂಘಟನಾ ಚತುರರೂ ಹೌದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ‘ಕೈ’ ಕಮಾಂಡ್​​; ಜಾತಿ ಸಮೀಕರಣದ ಆಧಾರದಲ್ಲಿ ತಂತ್ರ

ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ

ಮತ್ತೊಂದೆಡೆ ಕರ್ನಾಟಕದಲ್ಲಿನ ಸದ್ಯದ ಬೆಳವಣಿಗೆಗಳ ಬಗ್ಗೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ನಡೆದಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *