ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ತುಮಕೂರು, (ಮೇ 28): ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ಡಿಕೆ ಶಿವಕುಮಾರ್ ಬಹುವಾಗಿ ನಂಬುವ ನೊಣವಿನಕೆರೆ ಮಠದ (Nonavinakere Swamiji) ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದಿದ್ದರು.  ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ ಮಾತುಗಳನ್ನಾಡಿದ್ದು, ಶ್ರೀಮಠದ ಆಶೀರ್ವಾದ ಡಿಕೆ ಶಿವಕುಮಾರ ಅವರಿಗೆ ಇರುತ್ತದೆ. ರಾಜಾ‌ ಪ್ರತ್ಯಾಕ್ಷ ದೇವತಾ. ರಾಜ್ಯವನ್ನು ಆಳುವಂತಾ ದೊರೆ ನಾಯಕ. ರೈತರ ಪರ ,ಬಡವರ ಪರ ಇರುವ ನಾಯಕನಾಗಿ ಹೊರಹೊಮ್ಮುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಶ್ರೀ ‌ಮಠದ ಧರ್ಮದ ಧ್ವಜವನ್ನು ಕೊಟ್ಟು ಅವರಿಗೆ ಆರ್ಶಿವಾದ ಮಾಡುವ ಕಾಲ ಹತ್ತಿರ ಬಂದಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಅವರ ಬಾಳು ಬಂಗಾರವಾಗಲೆಂದು ಆರ್ಶಿವಾದ ಮಾಡುತ್ತೇನೆ. ಪ್ರಮಾಣವಚನದ ಸಮಯ ನಾವು ಹೇಳಲು ಆಗಲ್ಲ. ಅವರವರ ನಿರ್ಧಾರಕ್ಕೆ ಬಿಟ್ಟಿದ್ದು. ಅದಕ್ಕೆ ನಾನು ಅವರ ಪ್ರಮಾಣಚನ ಆಗುವ ವರೆಗೂ ನಾನು ಮಾತಾನಾಡಬಾರದು ಅಂತಾ ಇದ್ದೆ. ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆ ಶಿವಕುಮಾರ್ ನಡೆದು ಕೊಳ್ಳಬೇಕಾಗುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಅವರು ಸಾಧಕನಾಗಿದ್ದಾರೆ. ಎರಡು ವರ್ಷ ಅವರು ರಾಜಾ ಪ್ರತ್ಯಕ್ಷ ದೇವತಾ ಎನ್ನುವಂತೆ ಜನಸೇವೆ ಮಾಡುವ ಸದ್ಬುದ್ದಿ ಕೊಡಲಿ. ಧರ್ಮದ ಧ್ವಜಾವರಿಗೆ ಕೊಟ್ಟಿದ್ದೇವೆ.ಮುಂದೆ ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಇದನ್ನೂ ನೋಡಿ: ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ

Source link

Leave a Reply

Your email address will not be published. Required fields are marked *