
ಬೆಂಗಳೂರು, ಮೇ 29: ಸಿಲಿಕಾನ್ ಸಿಟಿ ಜನರಿಗೆ ವೀಕೆಂಡ್ ಆರಂಭದಲ್ಲೇ ಮಳೆ ಶಾಕ್ ನೀಡಿದೆ. ಮೋಡ ಕವಿದ ವಾತಾವರಣವಿದ್ದ ನಗರದಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಅಬ್ಬರ ಜೋರಾಗಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿಂದಾಗಿ ಜಲಾವೃತಗೊಂಡಿದ್ದು, ಮನೆಗೆ ಮರಳುತ್ತಿದ್ದ ಉದ್ಯೋಗಿಗಳು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರಾಕಾರ ಮಳೆಗೆ ಅಂಡರ್ಪಾಸ್ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.