ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸಂಖ್ಯೆ ಮತ್ತು ಅವುಗಳ ಹಂಚಿಕೆ ಕುರಿತು ತೀವ್ರ ಗೊಂದಲದಲ್ಲಿದೆ. ಎರಡರಿಂದ ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಅಥವಾ ಯಾವುದೇ ಹುದ್ದೆಯನ್ನು ರಚಿಸದೆ ಇರುವ ಆಯ್ಕೆಗಳ ಕುರಿತು ಚರ್ಚೆ ನಡೆದಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಸಾಧಿಸುವುದು ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ. ಒಬಿಸಿ, ಲಿಂಗಾಯತ, ಮುಸ್ಲಿಂ ಮತ್ತು ದಲಿತ ಸಮುದಾಯಗಳಿಂದ ಪ್ರಮುಖ ನಾಯಕರು ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಯತೀಂದ್ರ, ಈಶ್ವರ ಖಂಡ್ರೆ, ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್, ಜಿ. ಪರಮೇಶ್ವರ ಮತ್ತು ಪ್ರಿಯಾಂಕ್ ಖರ್ಗೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಇವರಲ್ಲಿ ಕೆಲವರನ್ನು ಆಯ್ಕೆ ಮಾಡುವುದು ಉಳಿದವರಿಗೆ ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಆತಂಕ ಪಕ್ಷಕ್ಕಿದೆ. ಹೀಗಾಗಿ ಶಾಸಕರ ಅರ್ಹತೆ, ಜಾತಿ ಮತ್ತು ಸಮುದಾಯವಾರು ಪ್ರಾತಿನಿಧ್ಯವನ್ನು ಪರಿಗಣಿಸಿ ಹೊಸ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸರ್ಕಸ್ ನಡೆಸುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.