Headlines

17 ವರ್ಷಗಳ ಬಳಿಕ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸತತ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರೀಗ ಪಟ್ಟ ತ್ಯಾಗ ಮಾಡಿದ್ದಾರೆ. ಅವರ ನಂತರ ಹೊಸ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಮುಂಚಿತವಾಗಿ, ಶಾಸಕರು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಯಾರ ಹೆಸರನ್ನು ಸೂಚಿಸುತ್ತದೋ ಅದಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳುವ ಮೂಲಕ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಟ್ಟರು. ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮನವೊಲಿಸುವ ಸವಾಲು ಎದುರಾಯಿತು. ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾದರು. ಈ ಮಧ್ಯಸ್ಥಿಕೆಯ ನಂತರ, ಶಾಸಕರು ಕೂಡ ಒಪ್ಪಿಗೆ ನೀಡಿದ್ದರಿಂದ ಡಿಕೆ ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *