
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಹೆಣ್ಣುಮಕ್ಕಳಂತೆ ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದನ್ನು ಕರ್ಣವೇದ ಸಂಸ್ಕಾರ ಎಂದು ಕರೆಯಲಾಗುತ್ತದೆ. ಇದು ಕೇವಲ ಅಲಂಕಾರ ಅಥವಾ ಫ್ಯಾಷನ್ ಆಗಿರದೆ, ಅನೇಕ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯೋಜನಗಳನ್ನು ಹೊಂದಿದೆ.
ಸಾಮಾನ್ಯವಾಗಿ ಉಪನಯನ ಸಮಯದಲ್ಲಿ ಅಥವಾ 21 ವರ್ಷದ ಒಳಗಿನ ಮಕ್ಕಳಿಗೆ ಕಿವಿ ಚುಚ್ಚಿಸುವುದು ಶುಭ ಎಂದು ಪರಿಗಣಿಸಲಾಗುತ್ತದೆ. ಆಧ್ಯಾತ್ಮಿಕವಾಗಿ, ಇದು ದೇಹವನ್ನು ಋಣಾತ್ಮಕ ಶಕ್ತಿಗಳಿಂದ ಮತ್ತು ರಾಹು-ಕೇತುಗಳ ಕೆಟ್ಟ ಪ್ರಭಾವಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಕಿವಿ ಚುಚ್ಚಿಸಿದಾಗ ದೇಹವು ಭಿನ್ನ ಆಗಿ, ಕೆಟ್ಟ ಶಕ್ತಿಗಳ ಆವಾಹನೆಯಾಗುವುದಿಲ್ಲ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.