Headlines

‘ಅಂದು ನೀವೇ ಸಿಎಂ ಆಗಿ ಅಂದಿದ್ದೆ, ಆಗದ್ದಕ್ಕೆ ಕಾಂಗ್ರೆಸ್ಸಿಗರೇ ಕಾರಣ’: ಡಾ. ಪರಮೇಶ್ವರ್​​ಗೆ ಹೆಚ್​.ಡಿ.ಕುಮಾರಸ್ವಾಮಿ ಟಾಂಗ್

‘ಅಂದು ನೀವೇ ಸಿಎಂ ಆಗಿ ಅಂದಿದ್ದೆ, ಆಗದ್ದಕ್ಕೆ ಕಾಂಗ್ರೆಸ್ಸಿಗರೇ ಕಾರಣ’: ಡಾ. ಪರಮೇಶ್ವರ್​​ಗೆ ಹೆಚ್​.ಡಿ.ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಜೂ.12: ತಮಗೆ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿದ ಕುರಿತು ಸಚಿವ ಡಾ. ಜಿ. ಪರಮೇಶ್ವರ್ ಇತ್ತೀಚೆಗೆ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ‘ಡಾ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ, ಈ ಬಗ್ಗೆ ಪರಮೇಶ್ವರ್ ಅವರು ನಮ್ಮನ್ನು ಕೇಳುವ ಬದಲು ಮೊದಲು ತಮ್ಮದೇ ಪಕ್ಷದವರ ಜೊತೆ ಕೂತು ಚರ್ಚೆ ಮಾಡಲಿ. ಅಂದು ಅವರು ನನ್ನ ಜೊತೆ ಬಂದಾಗ ನಾನು ಸಿಎಂ ಆಗಬೇಡಿ ಅಂತಾ ಹೇಳಿದ್ನಾ? ನೀವೇ ಮುಖ್ಯಮಂತ್ರಿಯಾಗಿ ಎಂದು ನಾನೇ ಖುದ್ದಾಗಿ ಹೇಳಿದ್ದೆ. ನೀವೇ ಸಿಎಂ ಆಗಿ ಎಂದಾಗಲೂ ಅವರು ಆಗಲಿಲ್ಲವಲ್ಲ ಎಂದು ಟಾಂಗ್ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *