Headlines

KRS Back Water: ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣವಾಗಿ ಗೋಚರಿಸುತ್ತಿರುವ ಪುರಾತನ ದೇಗುಲ! – Kannada News | KRS Dam: Submerged Lakshmi Narayanaswamy Temple Emerges as Water Levels Plummet

ಮಂಡ್ಯ, ಜೂನ್ 13: ಕೆಆರ್​ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೇ ಕುಸಿಯುತ್ತಿದ್ದು, ಪ್ರಸ್ತುತ 81 ಅಡಿಗೆ ತಲುಪಿದೆ. ಇದರಿಂದಾಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯ ಸಂಪೂರ್ಣವಾಗಿ ಗೋಚರಿಸುತ್ತಿದೆ. 90 ಅಡಿಗೆ ನೀರಿನ ಮಟ್ಟ ಕುಸಿದಾಗ ಈ ದೇವಾಲಯವು ಭಾಗಶಃ ಕಾಣಿಸಿಕೊಳ್ಳುತ್ತಿತ್ತು, ಆದರೆ ಈಗ ಸಂಪೂರ್ಣವಾಗಿ ಗೋಚರಿಸುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಆನಂದೂರು ಹಿನ್ನೀರಿನ ಪ್ರದೇಶದಲ್ಲಿರುವ ಈ ದೇವಾಲಯವು ಸಾಕಷ್ಟು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನೀರಿನ ಮಟ್ಟ ಕುಸಿತದಿಂದ ಸ್ಪಷ್ಟವಾಗಿ ಕಾಣಿಸುತ್ತಿರುವ ದೇವಾಲಯದ ಸುತ್ತಮುತ್ತ ಫೋಟೋಶೂಟ್‌ ಮಾಡಿಸಿಕೊಳ್ಳಲು ಜನರು ದೂರದ ಊರುಗಳಿಂದ ಆಗಮಿಸುತ್ತಿದ್ದಾರೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಈ ಹಿಂದೆ ಮುಳುಗಡೆಯಾಗಿದ್ದ ಸುಮಾರು 10-15 ಗ್ರಾಮಗಳು ಮತ್ತು ಕೆಲವು ದೇವಾಲಯಗಳನ್ನು ಸ್ಥಳಾಂತರಿಸಲಾಗಿತ್ತು. ಆದರೆ ಲಕ್ಷ್ಮಿ ನಾರಾಯಣಸ್ವಾಮಿ ದೇವಾಲಯವನ್ನು ಮಾತ್ರ ಅದೇ ಸ್ಥಳದಲ್ಲಿ ಉಳಿಸಿಕೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *