Headlines

Daily Devotional: ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ? – Kannada News | Why You Should Not Kill Snakes If They Enter Your Home

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮನೆಗೆ ಹಾವು ಬಂದ್ರೆ ಕೊಲ್ಲಬಾರದು ಯಾಕೆ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಾವು ಮನೆಗೆ ಪ್ರವೇಶಿಸಿದಾಗ ಅದನ್ನು ಕೊಲ್ಲುವುದು ಶಾಸ್ತ್ರಗಳ ಪ್ರಕಾರ ಅಶುಭಕರ. ಹಾವು ದೈವಾಂಶ ಸಂಭೂತವಾಗಿದ್ದು, ಶಿವನ ಕುತ್ತಿಗೆಯಲ್ಲಿ, ವಿಷ್ಣುವಿನ ಹಾಸಿಗೆಯಾಗಿ, ಗಣಪತಿಯ ಹೊಟ್ಟೆಯ ಸುತ್ತ ಕಾಣಿಸಿಕೊಳ್ಳುತ್ತದೆ. ಇಡೀ ಬ್ರಹ್ಮಾಂಡವೇ ಹಾವಿನ ಮೇಲೆ ನಿಂತಿದೆ ಎಂದು ಪುರಾಣಗಳು ಹೇಳುತ್ತವೆ.

ಇಂದು ಕಾಡುಗಳ ನಾಶದಿಂದಾಗಿ ಹಾವಿನ ಸಂತತಿ ಕಡಿಮೆಯಾಗುತ್ತಿದ್ದು, ಹಾವುಗಳು ಮಾನವ ವಾಸದ ಪ್ರದೇಶಗಳಿಗೆ ಬರುವುದು ಅನಿವಾರ್ಯವಾಗಿದೆ. ಮನೆಗೆ ಹಾವು ಬಂದಾಗ ತಕ್ಷಣ ಅದನ್ನು ಕೊಲ್ಲುವ ಬದಲು, ಹಾವಾಡಿಗರು ಅಥವಾ ಅರಣ್ಯ ಇಲಾಖೆಯವರನ್ನು ಕರೆದು ಅದನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Source link

Leave a Reply

Your email address will not be published. Required fields are marked *