Headlines

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ ಮಾಡಿ ಡಬಲ್ ಡೆಕ್ಕರ್ ಕಂ ಮೆಟ್ರೋಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಸದ್ಯದಲ್ಲೇ ಇದಕ್ಕೆ ಗ್ರೀನ್ ಸಿಗ್ನಲ್ ‌ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಖ್ಯಾಂಶಗಳು

  • ಕೇಂದ್ರದಿಂದ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಸಿಗಲಿದೆ ಗುಡ್ ನ್ಯೂಸ್
  • ಆರೆಂಜ್ ಲೈನ್ ಮೆಟ್ರೋ ಮಾರ್ಗದಲ್ಲೂ ಬರಲಿದೆ ಡಬಲ್ ಡೆಕ್ಕರ್ ಫ್ಲೈ ಓವರ್
  • ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ

ಜೆ.ಪಿ ನಗರ ನಾಲ್ಕನೇ ಹಂತದಿಂದ ಕೆಂಪಾಪುರ, ಹೊಸಹಳ್ಳಿ ಟು ಕಡಬಗೆರೆ.ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಆಗಸ್ಟ್- 10 ರಂದು ಶಂಕುಸ್ಥಾಪನೆ ಮಾಡಿದ್ದರು. ಆದರೆ ಇಲ್ಲಿಯವರೆಗೆ ಮೆಟ್ರೋ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಇದಕ್ಕೆ ಪ್ರಮುಖ ಕಾರಣ ಅಂದರೆ, ರಾಜ್ಯ ಸರ್ಕಾರ ಈ ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮೆಟ್ರೋ ಜೊತೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಇದಕ್ಕೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಅಸಮಾಧಾನ ವ್ಯಕ್ತಪಡಿಸಿತ್ತು. ಇದರಿಂದ ಮೆಟ್ರೋ ಪ್ರಯಾಣಿಕರ ಮೇಲೆ ಪರಿಣಾಮ ಬೀರಳಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಿದ್ರೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತದೆ ಅನ್ನೋ ಕಾರಣ ನೀಡಿತ್ತು. ಆದರೆ ಇದೀಗ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ ಮಾಡಿ ಡಬಲ್ ಡೆಕ್ಕರ್ ಕಂ ಮೆಟ್ರೋಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದು, ಶೀಘ್ರದಲ್ಲೇ ಅನುಮತಿ ನೀಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಒಂದು ಭೇಟಿ, ಹತ್ತಾರು ಬೇಡಿಕೆ: ಪ್ರಧಾನಿ ಮೋದಿ ಮುಂದೆ ಡಿಕೆಶಿ ಇಟ್ಟ ಬೇಡಿಕೆಗಳಾವುವು? ಇಲ್ಲಿದೆ ಪಟ್ಟಿ

ಇನ್ನೂ ಮೆಟ್ರೋ 3ನೇ ಹಂತದಲ್ಲಿ ಎರಡು ಮಾರ್ಗಗಳಿದ್ದು, ಜೆಪಿ ನಗರ 4ನೇ ಹಂತದಿಂದ-ಕೆಂಪಾಪುರ ಒಟ್ಟು 32.5 ಕಿಮೀ ಉದ್ದದ ಮಾರ್ಗ.ಹೊಸಹಳ್ಳಿಯಿಂದ ಮಾಗಡಿ ರಸ್ತೆಯಾಗಿ ಕಡಬಗೆರೆ ಒಟ್ಟು 12.15 ಕಿಮೀ. ಉದ್ದವನ್ನು ಹೊಂದಿದೆ. ಈ ಬಗ್ಗೆ ಮಾತನಾಡಿದ ಸ್ಥಳೀಯ ನಿವಾಸಿ, ನಮ್ಮ ಮನೆಯ ಮುಂಭಾಗದಲ್ಲಿ ಮೆಟ್ರೋ ಕಂ ಡಬಲ್ ಡೆಕ್ಕರ್ ಫ್ಲೈ ಹಾದು ಹೋಗುವುದು ತುಂಬಾ ಸಂತೋಷದ ವಿಷ್ಯ. ಇದರಿಂದ ರಿಂಗ್ ರೋಡ್ ನಲ್ಲಿ ಟ್ರಾಫಿಕ್ ಸಮಸ್ಯೆ ‌ಕಂಟ್ರೊಲ್ ಆಗಲಿದೆ, ವಾಯುಮಾಲಿನ್ಯದ ಪ್ರಮಾಣವು ಕಡಿಮೆ ಆಗಲಿದೆ. ಜನರು ಸಂಚಾರ ಮಾಡಲು ಸಾಕಷ್ಟು ಸಹಾಯ ಆಗಲಿದೆ. ಪೀಣ್ಯದಲ್ಲಿರುವ ಸಾವಿರಾರು ಇಂಡಸ್ಟ್ರಿಗಳಿದ್ದು, ಕೆಲಸಕ್ಕೆ ಹೋಗುವವರಿಗೆ ಅನುಕೂಲವಾಗಲಿದೆ ಅಂತಾರೇ.

ಒಟ್ನಲ್ಲಿ ಆರೆಂಜ್ ಲೈನ್‌ ಮೆಟ್ರೋ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣ ಮಾಡಲು ಸದ್ಯದಲ್ಲೇ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಲಿದ್ದು, ಇದರಿಂದ ಔಟರ್ ರಿಂಗ್ ರೋಡ್ ನಿವಾಸಿಗಳಿಗೆ ಮತ್ತು ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:59 pm, Sun, 14 June 26

Source link

Leave a Reply

Your email address will not be published. Required fields are marked *