Headlines

ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ – Kannada News | Shiv Sena UBT Split Uddhav Thackeray Calls Urgent Meet Amidst ‘Operation Tiger’ Rumors

ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಬಿರುಗಾಳಿ ಎದ್ದಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೆ ಸೀಳು ಉಂಟಾಗಬಹುದು ಎಂಬ ಊಹಾಪೋಹಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray)ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪಕ್ಷದ ಸಂಸದರ ನಿರ್ಣಾಯಕ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿಡಲು ಮತ್ತು ಸಂಸದರು ಕೈಕೊಡುವುದನ್ನು ತಪ್ಪಿಸಲು ಈ ಸಭೆಯಲ್ಲಿ ಎಲ್ಲಾ ಲೋಕಸಭಾ ಸದಸ್ಯರಿಗೂ ಹಾಜರಿರಲು ವಿಪ್ ಜಾರಿ ಮಾಡಲಾಗಿದೆ.

ಯುಬಿಟಿ ಪಕ್ಷದ ಒಟ್ಟು 9 ಲೋಕಸಭಾ ಸಂಸದರಲ್ಲಿ 6 ಸಂಸದರು ತಮ್ಮ ಕಡೆ ಇದ್ದಾರೆ ಎಂದು ಬಂಡಾಯ ನಾಯಕರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದೆ. ಈ ಬಂಡಾಯ ಸಂಸದರು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಸಂಸದರನ್ನು ಸೆಳೆಯಲು ತಲಾ 50 ಕೋಟಿ ರೂಪಾಯಿ ಆಫರ್ ನೀಡಲಾಗಿದೆ ಎಂದು ಉದ್ಧವ್ ಠಾಕ್ರೆ ಆಪ್ತ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ. ಶಿವಸೇನೆ (ಯುಬಿಟಿ) ಸಂಸದ ಅನಿಲ್ ದೇಸಾಯಿ ಅವರ ಪ್ರಕಾರ, ಬಂಡಾಯಗಾರರು ಕಾನೂನಿನಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲ.
ಕೇವಲ 3ನೇ 2ರಷ್ಟು (6 ಸಂಸದರು) ಬಹುಮತ ಇದೆ ಎಂದ ತಕ್ಷಣ ಮತ್ತೊಂದು ಪಕ್ಷದೊಂದಿಗೆ ವಿಲೀನವಾಗಲು ಕಾನೂನಿನಲ್ಲಿ ಅವಕಾಶವಿಲ್ಲ. ಮೂಲ ಪಕ್ಷ ನಿರ್ಧಾರ ಮಾಡಿದರೆ ಮಾತ್ರ ವಿಲೀನ ಸಾಧ್ಯ. ಹಾಗಾಗಿ ಬಂಡಾಯಗಾರರ ಸಂಖ್ಯೆ ಎಷ್ಟೇ ಇದ್ದರೂ ಸ್ಪೀಕರ್ ನಿಯಮಗಳ ಪ್ರಕಾರ ಅವರನ್ನು ಮಾನ್ಯ ಮಾಡಲು ಬರುವುದಿಲ್ಲ.

ಮತ್ತಷ್ಟು ಓದಿ:ನಿಯತ್ತಿಲ್ಲದವರು ಪಕ್ಷ ಬಿಟ್ಟು ಹೋಗಬಹುದು; ‘ಆಪರೇಷನ್ ಟೈಗರ್’ ಬೆನ್ನಲ್ಲೇ ಸಂಸದರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ

ಸದ್ಯಕ್ಕೆ ಚೆಂಡು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಂಗಳದಲ್ಲಿದೆ. ಯಾವುದೇ ಕಾನೂನುಬಾಹಿರ ಪಕ್ಷಾಂತರಕ್ಕೆ ಅವಕಾಶ ನೀಡದಂತೆ ಉದ್ಧವ್ ಬಣ ಈಗಾಗಲೇ ಸ್ಪೀಕರ್‌ಗೆ ಮನವಿ ಮಾಡಿದೆ. ಉದ್ಧವ್ ಕರೆದಿರುವ ಇಂದಿನ ಸಭೆಗೆ ಎಷ್ಟು ಜನ ಸಂಸದರು ಗೈರಾಗುತ್ತಾರೆ ಎಂಬುದರ ಮೇಲೆ ‘ಆಪರೇಷನ್ ಟೈಗರ್’ ಭವಿಷ್ಯ ನಿರ್ಧಾರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *