ಕಲಬುರಗಿ/ಬೀದರ್, ಜೂನ್ 24: ಕನ್ನೇರಿ ಶ್ರೀಗಳು ಭಾಗಿಯಾಗಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಜೂನ್ 28ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನೇರಿ ಸ್ವಾಮೀಜಿ ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಕೆ ಹಿನ್ನೆಲೆ ಕೋರ್ಟ್ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ 2,500 ಜನ ಭಾಗಿಯಾಗಲು ನ್ಯಾಯಾಲಯ ಸಮ್ಮತಿಸಿದ್ದು, ಕಾನೂನು ಸುವ್ಯವಸ್ಥೆ ಹಾಳಾಗದಂತೆ ಕಾರ್ಯಕ್ರಮ ನಡೆಸಲು ಸೂಚಿಸಿದೆ. ಒಂದೊಮ್ಮೆ ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಕಾರ್ಯಕ್ರಮದ ಆಯೋಜಕರೇ ನೇರ ಹೊಣೆ ಎಂದೂ ತಿಳಿಸಿದೆ. ಸ್ವಾಮೀಜಿ ಪರ ವಕೀಲ ವೆಂಕಟೇಶ್ ದಳವಾಯಿ ಮತ್ತು ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಈ ಸಂಬಂಧ ಆದೇಶ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.