Headlines

BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ – Kannada News | BY Vijayendra Visits Dharmasthala: Offers Special Prayers to Lord Manjunatha Amid Cross Voting Controversy

ಮಂಗಳೂರು, ಜೂನ್ 26: ದೆಹಲಿ ಹೈಕಮಾಂಡ್ ಭೇಟಿಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸನ್ನಿಧಿ ವಸತಿ ಗೃಹದಿಂದ ಆಗಮಿಸಿದ ಅವರು, ಶ್ರೀ ಮಂಜುನಾಥಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇತ್ತೀಚೆಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಅಡ್ಡ ಮತದಾನದ ವಿಚಾರದಲ್ಲಿ ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಸ್ತಾಪ ಮಾಡಿದ್ದ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿರುವ ವಿಜಯೇಂದ್ರ ಅವರಿಗೆ ಸಂಸದ ಬ್ರಿಜೇಶ್ ಚೌಟ ಸಾಥ್ ನೀಡಿದ್ದು, ಸ್ಥಳೀಯ ಶಾಸಕರಾದ ಹರೀಶ್ ಪೂಂಜಾ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹಾಗೂ ಯಶ್‌ಪಾಲ್ ಸುವರ್ಣ ಸೇರಿದಂತೆ ಹಲವು ಗಣ್ಯರು ಅವರೊಂದಿಗೆ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *