ಬೆಂಗಳೂರು/ಮಂಡ್ಯ, (ಜೂನ್ 26): ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇತ್ತೀಚೆಗೆ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾವೇರಿ ನದಿ ಸಾರ್ವಜನಿಕರ ರಕ್ಷಣೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್ಗಳು, ಜಾಗೃತಿ ಫಲಕಗಳು ಹಾಗೂ ಗೈಡ್ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಗೈಡ್ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚಿಸಿದ್ದಾರೆ.