Headlines

ಸರಣಿ ಸಮಸ್ಯೆ ಮಧ್ಯೆ ಮತ್ತೊಂದು ದುರಂತ: ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ​ ಸಾವು – Kannada News | Metro Pillar Tragedy: Worker Dies of Electric Shock at Trinity Station

ಬೆಂಗಳೂರು, ಜೂನ್​​ 26: ನಮ್ಮ ಮೆಟ್ರೋ (Namma Metro) ಪಿಲ್ಲರ್​ಗೆ ಲೈಟಿಂಗ್ಸ್​​​ ಅಳವಡಿಸುವಾಗ ದುರಂತವೊಂದು ಸಂಭವಿಸಿದ್ದು, ವಿದ್ಯುತ್​ ಪ್ರವಹಿಸಿ ಕಾರ್ಮಿಕ​​ ಸಾವನ್ನಪ್ಪಿದ್ದಾರೆ (death). ಗುರಪ್ಪ(70) ಮೃತ ಕಾರ್ಮಿಕ. ವೈಟ್‌ಫೀಲ್ಡ್​ ಟು ಚಲ್ಲಘಟ್ಟ ಮಾರ್ಗದ ನೇರಳೆ ಮಾರ್ಗದ ಟ್ರಿನಿಟಿ ಮೆಟ್ರೋ ನಿಲ್ದಾಣದ 153ನೇ ಪಿಲ್ಲರ್​​ ಬಳಿ ಘಟನೆ ನಡೆದಿದೆ. ಘಟನೆ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಎಂಆರ್​ ಎಲೆಕ್ಟ್ರಿಕಲ್ಸ್ ಎಂಬ ಸಂಸ್ಥೆ ಬಿಎಂಆರ್​ಸಿಎಲ್​​ನಿಂದ ಲೈಟಿಂಗ್ಸ್ ಹಾಕುವ ಟೆಂಡರ್ ಪಡೆದಿತ್ತು. ಹಾಗಾಗಿ ಸಂಸ್ಥೆಯ ಕಾರ್ಮಿಕ ಗುರಪ್ಪ ಮೆಟ್ರೋ ಪಿಲ್ಲರ್​ಗೆ ಲೈಟಿಂಗ್ಸ್ ಅಳವಡಿಸುತ್ತಿದ್ದರು. ಲೈಟಿಂಗ್​​ಗಾಗಿ ಅರ್ಥಿಂಗ್ ಗುಂಡಿ ಅಗೆಯಲಾಗುತಿತ್ತು. ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ಗುಂಡಿ ಅಗೆಯುವಾಗ ಅಡಿಯಲ್ಲಿದ್ದ ಕೇಬಲ್​​ಗೆ ಡ್ರಿಲ್ಲಿಂಗ್ ಮಿಷನ್​ ತಾಗಿದೆ.​

ಇದನ್ನೂ ಓದಿ: ಚೂರು ಹೆಚ್ಚು ಕಮ್ಮಿಯಾಗಿದ್ರು ದೊಡ್ಡ ಅನಾಹುತ: ಮೆಟ್ರೋನಲ್ಲಿ ತಾಂತ್ರಿಕ ದೋಷಕ್ಕೆ ಸ್ಫೋಟಕ ಕಾರಣ ಬಯಲು

ಈ ವೇಳೆ ವಿದ್ಯುತ್ ಶಾಕ್​ನಿಂದ ಗುರಪ್ಪ ಅಸ್ವಸ್ಥರಾಗಿದ್ದಾರೆ. ತಕ್ಷಣ ಸ್ಥಳಿಯರು ಸೇಂಟ್ ಫಿಲೋಮಿನಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಗುರಪ್ಪ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ವಿದ್ಯುತ್​ ಪ್ರವಹಿಸಿ ಯುವಕ ದುರ್ಮರಣ

ಮತ್ತೊಂದು ಪ್ರಕರಣದಲ್ಲಿ ವಿದ್ಯುತ್​ ಪ್ರವಹಿಸಿ ಯುವಕ ದುರ್ಮರಣ ಹೊಂದಿರುವಂತ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್​ ಶೆಟ್ಟಿ(32) ಮೃತ ವ್ಯಕ್ತಿ. ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ಬಾಗಿಲು ಲಾಕ್ ಆಗದೇ ಇದ್ದುದರ ಅಸಲಿ ಕಾರಣ ಬಯಲು

ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್​​, ಪತ್ರೊಡೆ ಎಲೆ ಕೀಳಲು ಮರವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಶಾಕ್​​ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಿವಾಹಿತನಾಗಿದ್ದ ಅಭಿಷೇಕ್ ಶೆಟ್ಟಿಗೆ ತಂದೆ-ತಾಯಿ ಇರಲಿಲ್ಲ. ತನ್ನ ಚಿಕ್ಕಮನ ಮಗಳ ಮನೆಯಲ್ಲಿ ವಾಸವಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *