Headlines

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ: ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ – Kannada News | HD Kumaraswamy Urges fans Calm After Chikkaballapur Incident

ಬೆಂಗಳೂರು, ಜೂನ್​​ 28: ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ. ಪ್ರಚೋದನೆ ಮಾಡಲೆಂದೇ ಒಂದು ಗುಂಪು ಕೆಲಸ ಮಾಡುತ್ತಿದೆ. ಹೀಗಾಗಿ ಕಾರ್ಯಕರ್ತರು ಉದ್ವೇಗಕ್ಕೆ ಒಳಗಾಗುವುದು ಬೇಡ. ಚಪ್ಪಲಿ ಎಸೆಯುವುದು ನಮ್ಮ ಸಂಸ್ಕೃತಿ ಅಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ವೇಳೆ ಗಲಾಟೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರ ವಿರುದ್ಧವೂ ಧಿಕ್ಕಾರ ಕೂಗುವುದು ಬೇಡ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವುದು ಬೇಡ. ಇಂಥ ಸಂದರ್ಭದಲ್ಲಿ ಶಾಂತಚಿತ್ತದಿಂದ ಇರುವಂತೆ ಮನವಿ ಮಾಡಿದರು. ಇನ್ನು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ನಡವಳಿಕೆಗೆ ನನ್ನ ನಮಸ್ಕಾರ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *