ಬೆಂಗಳೂರು, ಜೂನ್ 30: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರು ಪೈಪೋಟಿ ನಡೆಸುತ್ತಿರುವ ನಡುವೆ ತನಗೆ ಮಂತ್ರಿ ಸ್ಥಾನ ಬೇಡ ಎಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ನಾನು ಎಲ್ಲೂ ಹೇಳಿಲ್ಲ. ಹೀಗಾಗಿ ತನೆಗೆ ಕೊಟ್ಟರೂ ಸಚಿವ ಸ್ಥಾನ ಬೇಡ. ಇದರಲ್ಲಿ ವೈರಾಗ್ಯ ಅಂತೇನೂ ಇಲ್ಲ. ನಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದೀನಿ. ಅದಕ್ಕೆ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.