ಬೆಂಗಳೂರು, (ಜೂನ್ 30): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರು ಮಾಡಿದ ಅಡ್ಡಮತದಾನ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ಕೆಲ ಶಾಸಕರ ಮೇಲೆ ಅನುಮಾನ ವ್ಯಕ್ತವಾಗಿದೆ. ಅ ಪಟ್ಟಿಯಲ್ಲಿ ಶಾಸಕ ಹೆಚ್.ಕೆ.ಸುರೇಶ್ ಹೆಸರು ಕೇಳಿಬಂದಿದ್ದರಿಂದ ಅವರು ಇಂದು (ಜೂನ್ 30) ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಈ ಮೂಲಕ ನಾನು ಅಡ್ಡಮತದಾನ ಮಾಡಿಲ್ಲ ಎಂದಿದ್ದಾರೆ. ಇನ್ನು ಈ ಬಗ್ಗೆ ವಿಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಅಡ್ಡ ಮತದಾನ ಮಾಡಿರುವ ಶಾಸಕರ ಪಟ್ಟಿ ದೆಹಲಿಯಲ್ಲಿದ್ದು, ಯಾರೂ ಆಣೆ ಪ್ರಮಾಣ ಮಾಡಬೇಡಿ. ಕೇಂದ್ರದವರು ಪತ್ತೆ ಹಚ್ಚುತ್ತಾರೆ. ಸರಿಯಾಗಿ ಏಟು ಕೊಡುತ್ತೇವೆ. ಕಾನೂನು ಪ್ರಕಾರ ಕ್ರಮ ಆಗುತ್ತೆ ಎಂದರು.