Headlines

ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಡಿಕೆಶಿ ಹೇಳಿದ್ದೇನು? – Kannada News | Bengaluru quarry tragedy: At least 7 labourers killed: CM Dk Shivakumr Talks about incident

ಬೆಂಗಳೂರು, (ಜುಲೈ 02): ಮಾಗಡಿ ರಸ್ತೆಯ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ದುರಂತದಲ್ಲಿ ಏಳು ಜನ ಸಾವನ್ನಪ್ಪಿದ್ದು, ಐದಾರು ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನು ಗಾಯಗೊಂಡಿರುವರನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇದೀಗ ಸಿಎಂ ಡಿಕೆ ಶಿವಕುಮಾರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮತನಾಡಿದ ಡಿಕೆಶಿ, ಬೆಳಗ್ಗೆ 7ರ ಸುಮಾರಿಗೆ ಘಟನೆ ನಡೆದಿದ್ದು 7 ಜನ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ, ಒಬ್ಬರ ಸ್ಥಿತಿ ಬಹಳ ಗಂಭೀರವಾಗಿದೆ. ಯಾದಗಿರಿ, ಛತ್ತೀಸ್​ಗಢ ಮೂಲದ 7 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬ ಸದಸ್ಯರ ಜೊತೆ ಅಧಿಕಾರಿಗಳು ಚರ್ಚಿಸಿದ್ದು, ಮೃತದೇಹಗಳನ್ನು ಕಳುಹಿಸಲು ವ್ಯವಸ್ಥೆ ಮಾಡುತ್ತೇವೆ. ಸರ್ಕಾರದ ನಿಯಮಾನುಸಾರ ಪರಿಹಾರ ನೀಡುತ್ತೇವೆ. ಕಲ್ಲು ಕ್ವಾರಿಗಳ ಮಾಲೀಕರ ಜೊತೆ ಅಧಿಕಾರಿಗಳು ಮಾತನಾಡಿದ್ದು, ಮೃತರ ಕುಟುಂಬಗಳಿಗೆ ಮಾಲೀಕರಿಂದಲೂ ಪರಿಹಾರ ಕೊಡಿಸ್ತೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *