Headlines

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸಂಪರ್ಕ ಸೇತುವೆಗಳು ಜಲಾವೃತ – Kannada News | Maharashtra Rain Fury: Three Key Connecting Bridges Submerged in Belagavi’s Nippani Amid Rising River Levels

ಬೆಳಗಾವಿ, ಜುಲೈ 05: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ ಆರ್ಭಟ ಹಿನ್ನೆಲೆ ನಿಪ್ಪಾಣಿ ತಾಲೂಕಿನಲ್ಲಿ ಮೂರು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಸಂಪರ್ಕಿಸುವ ಸೇತುವೆ ಮುಳುಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ, ಬೋಜವಾಡಿ-ಗಜವರವಾಡಿ ಸೇತುವೆಗಳೂ ಸಂಪೂರ್ಣ ಜಲಾವೃತವಾಗಿವೆ. ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದು, ಉಕ್ಕಿ ಹರಿಯುತ್ತಿರುವ ನದಿಗಳಿಗೆ ಯಾರೂ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *