Headlines

ಗದಗದಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು – Kannada News | Drought situation across Karnataka: Farmers Tears As Rain deficit At Gadag

ಗದಗ, (ಜುಲೈ 07): ಕರ್ನಾಟಕದ ಪಕ್ಕದ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೇ ನಮ್ಮ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಆದ್ರೆ, ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ವರುಣ ಕೃಪೆ ತೋರಿಸುತ್ತಿಲ್ಲ. ಗದನಲ್ಲೂ ಸಹ ಮುಂಗಾರು ಮಳೆ ಕೈಕೊಟ್ಟಿದ್ದು, ಹೆಸರು, ಗೋವಿನ ಜೋಳ, ಮೆಣಸಿನಕಾಯಿ ಸೇರಿ ಬಿತ್ತಿದ ಹಲವು ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ಮಂಡಿಯೂರಿ ಕಣ್ಣೀರಿಟ್ಟಿರುವ ದೃಶ್ಯ ಮನಕಲಕುವಂತಿದೆ. ಮಳೆ ಇವತ್ತು ಬರುತ್ತೆ ನಾಳೆ ಎಂದು ಆಕಾಶದತ್ತ ಮುಖ ಮಾಡಿ ಕುಳಿತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಸಂಜೀವ ಪಾಂಡ್ರೆ ನೀಡಿದ ಪ್ರತ್ಯಕ್ಷ ವರದಿ‌ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *