Headlines

ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​ – Kannada News | Karnataka Cabinet Expansion: BK Hariprasad’s Remarks Before Leaving for Delhi

ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್​ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್​ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್​ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ ಉಸ್ತುವಾರಿ ಸುರ್ಜೇವಾಲ ಅವರ ಬಳಿ ಇದೆ, ಅವರು ಚರ್ಚೆ ಮಾಡಿದಾಗ ಗೊತ್ತಾಗುತ್ತದೆ’’ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *