Headlines

ಬಂಡೀಪುರದಲ್ಲಿ ಏಕಾಏಕಿ ಕಾರುಗಳ ಮೇಲೆ ಕಾಡಾನೆ ದಾಳಿ, ಬೆಚ್ಚಿಬಿದ್ದ ಪ್ರಯಾಣಿಕರು: ವಿಡಿಯೋ ವೈರಲ್ – Kannada News | Bandipur Elephant Vegetable King Returns, Charges at Cars; Viral Video Sparks Concern

ಚಾಮರಾಜನಗರ, ಜುಲೈ 20: ಹಲವು ದಿನಗಳಿಂದ ಸೈಲೆಂಟಾಗಿದ್ದ ಬಂಡೀಪುರದ ‘ತರಕಾರಿ ರಾಜ’ ಕಾಡಾನೆ ಮತ್ತೆ ರಸ್ತೆಗೆ ಇಳಿದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೆಕ್ಕನಹಳ್ಳ ರಸ್ತೆಯಲ್ಲಿ ಆಹಾರ ಅರಸಿ ಬಂದ ಆನೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರುಗಳ ಬಳಿ ತೆರಳಿ ದಾಳಿ ನಡೆಸಿದೆ. ತರಕಾರಿ ಸಾಗಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ನಡುರಸ್ತೆಯಲ್ಲೇ ನಿಲ್ಲುವ ಈ ಕಾಡಾನೆ, ಈ ಬಾರಿ ಕಾರುಗಳ ಬಳಿಗೂ ತೆರಳಿ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲವು ದಿನಗಳ ಹಿಂದಷ್ಟೇ ಈ ಕಾಡಾನೆ ಲಾರಿಯೊಂದರ ಮೇಲೆ ದಾಳಿ ಮಾಡಿದ್ದು, ಆ ವಿಡಿಯೋ ಸಹ ವೈರಲ್ ಆಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *