Headlines

Karnataka Weather Update: ಬೆಂಗಳೂರಿಗರಿಗೆ ತಂಪೆರೆದ ವರುಣ, ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​ – Kannada News | Bengaluru Rain: Heavy Downpour Lashes City; IMD Issues Yellow Alert for Half of Karnataka Tomorrow

ಬೆಂಗಳೂರು, ಜುಲೈ 20: ಕಳೆದ 3-4 ದಿನಗಳಿಂದ ಬೆಂಗಳೂರಲ್ಲಿ (Bengaluru) ಮಳೆಯಾಗುತ್ತಿದ್ದು, ಇಂದು ಕೂಡ ನಗರದ ವಿವಿಧೆಡೆ ಉತ್ತಮ ವರ್ಷಧಾರೆಯಾಗಿದೆ. ಬಸವನಗುಡಿ, ಶಾಂತಿನಗರ, ಟೌನ್​ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ದ್ವಿಚಕ್ರ ವಾಹನಗಳ ಸವಾರರು ಮತ್ತು ಪಾದಚಾರಿಗಳು ಪರದಾಟ ನಡೆಸಿದ್ದು, ಬಸ್​​ ನಿಲ್ದಾಣ ಮತ್ತು ಅಂಗಡಿಮುಂಗಟ್ಟುಗಳ ಬಳಿ ನಿಂತು ಆಶ್ರಯ ಪಡೆದಿದ್ದಾರೆ.

ಅರ್ಧ ಕರ್ನಾಟಕಕ್ಕೆ ನಾಳೆ ಯೆಲ್ಲೋ ಅಲರ್ಟ್​

ಈ ನಡುವೆ ಹವಾಮಾನ ಇಲಾಖೆ ನಾಳೆ ಅರ್ಧ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ ಘೊಷಿಸಿದೆ. ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧೆಡೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಬೈಂದೂರಿನ ಕೆರ್ಗಾಳುವಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ

ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಳುವಿನಲ್ಲಿ ನಿನ್ನೆ ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ 160.5 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ 1ರಲ್ಲಿ 155 ಮಿ.ಮೀ. , ದಕ್ಷಿಣ ಕನ್ನಡದ ಬೆಳ್ತಂಗಡಿಯ ಮುಂಡಾಜೆಯಲ್ಲಿ 98.5 ಮಿ.ಮೀ. , ಮಡಿಕೇರಿಯ ಪೆರಾಜೆ ಮತ್ತು ಯಾದಗಿರಿಯ ಸುರಪುರದ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ. , ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ. ಮತ್ತು ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *