Headlines

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ದಂಪತಿ ಮೇಲೆ ಹಲ್ಲೆ: ವೈದ್ಯನ ಬಂಧನ – Kannada News | Bengaluru Doctor Arrested for Assaulting Bangladeshi Couple in Bellandur

ಬೆಂಗಳೂರು, ಜುಲೈ 26: ಬೆಳ್ಳಂದೂರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶಿ ದಂಪತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸ್ಥಳೀಯ ವೈದ್ಯರೊಬ್ಬರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಸಾಯಿ ಕ್ಲಿನಿಕ್‌ನ ಡಾ. ನಾಗೇಂದ್ರ ಬಂಧಿತ ವೈದ್ಯ. ವೈಟ್ ಫೀಲ್ಡ್ ಸಮೀಪದ ಬೆಟ್ಟದಾಸಪುರದಲ್ಲಿ ವಾಸವಾಗಿರುವ ಬಾಂಗ್ಲಾದೇಶ ಮೂಲದ ನಸ್ರೀನಾ ಬಿಲಾಲ್ (23) ಎಂಬ ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ನಡೆದಿದ್ದೇನು?

ನಸ್ರೀನಾ ಬಿಲಾಲ್ ಹಾಗೂ ಅವರ ಪತಿ ಮಹಮ್ಮದ್ ಬಿಲಾಲ್ (ಚಾಲಕ) ಅವರು ಬಾಂಗ್ಲಾದೇಶದ ನಿವಾಸಿಗಳು ಎಂಬ ಕಾರಣಕ್ಕೆ ಡಾ. ನಾಗೇಂದ್ರ ಅವರು ದಂಪತಿಯ ಪೌರತ್ವವನ್ನು ಪ್ರಶ್ನಿಸಿ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ವೈದ್ಯ ನಾಗೇಂದ್ರ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಬೆಳ್ಳಂದೂರು ಪೊಲೀಸರು ಡಾ. ನಾಗೇಂದ್ರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಅಧಿಕಾರಿಗಳು ಹೇಳಿದ್ದೇನು?

ಸಂತ್ರಸ್ತರು ಬಾಂಗ್ಲಾದೇಶಿ ಮೂಲದವರಾಗಿದ್ದು, ಪ್ರದೇಶದಲ್ಲಿ ಅಕ್ರಮ ವಲಸಿಗರು ಹೆಚ್ಚಾಗಿದ್ದಾರೆಂಬ ಭಾವೋದ್ವೇಗದಿಂದ ವೈದ್ಯರು ಈ ರೀತಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ. “ದಂಪತಿ ಬಾಂಗ್ಲಾದೇಶದವರಾಗಿದ್ದರೂ ಅವರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ, ವೈದ್ಯರು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಬದಲು ನಮಗೆ ಮಾಹಿತಿ ನೀಡಬೇಕಿತ್ತು” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ದಂಪತಿಯ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *