ಬೆಂಗಳೂರು/ದೆಹಲಿ, ಜುಲೈ 28: ಆರ್ಎಸ್ಎಸ್ ನೋಂದಣಿಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಅಭಿಯಾನವೊಂದು ಚುರುಕುಗೊಂಡಿದೆ. ಈ ಅಭಿಯಾನದ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ “ಆರ್ಎಸ್ಎಸ್ ನೋಂದಣಿ ಯಾಕೆ ಅಗತ್ಯ?” ಎಂಬ ವಿಷಯದ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಮಾಜವಾದಿ ಸಂಗಮ್ ಸಂಸ್ಥೆಯು ಮಧ್ಯಾಹ್ನ 3:30ಕ್ಕೆ ಈ ಸಂವಾದವನ್ನು ಹಮ್ಮಿಕೊಂಡಿದ್ದು, ಕರ್ನಾಟಕದ ಸಚಿವರಾದ ಪ್ರಿಯಾಂಕ್ ಖರ್ಗೆ ಇದರಲ್ಲಿ ಭಾಗವಹಿಸಲಿದ್ದಾರೆ. ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಆರ್ಎಸ್ಎಸ್ ಸಂಸ್ಥೆಯು ಏಕೆ ನೋಂದಣಿ ಮಾಡಿಕೊಳ್ಳಬೇಕು ಮತ್ತು ಅದರ ಅಗತ್ಯತೆ ಏನು ಎಂಬುದರ ಬಗ್ಗೆ ಪ್ರಮುಖವಾಗಿ ಚರ್ಚೆ ನಡಡೆಯಲಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.